ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Wednesday, October 20th, 2021
Baby Girl

ಬಂಟ್ವಾಳ : ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ರಸ್ತೆ ಮಧ್ಯೆ ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ  ಜನ್ಮ ನೀಡಿರುವ ಘಟನೆ ಬಂಟ್ವಾಳದ ಫರಂಗಿಪೇಟೆಯ ಸಮೀಪ ನಡೆದಿದೆ. ಅನಂತಾಡಿ ನಿವಾಸಿ ಸಂದೀಪ್ ಅವರ ಪತ್ನಿ ಸುಪ್ರಿತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ನಿವಾಸಿ ಗರ್ಭಿಣಿಯಾಗಿದ್ದ ಸುಪ್ರಿತಾ ಅವರನ್ನು ಹೆರಿಗೆಗಾಗಿ 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿದ್ದರು. ಈ ವೇಳೆ ಫರಂಗಿಪೇಟೆಯ ಸಮೀಪ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಾಣಿ ವ್ಯಾಪ್ತಿಯ 108 ಆ್ಯಂಬುಲೆನ್ಸ್ ಮೂಲಕ […]

ಆಂಬ್ಯುಲೆನ್ಸ್ ಮೂಲಕ ಮೈಸೂರಿಗೆ ಪ್ರಯಾಣ; 7 ಮಂದಿಯನ್ನು ಬಂಧಿಸಿದ ಪೊಲೀಸರು

Sunday, April 19th, 2020
Puttur

ಮಂಗಳೂರು: ಆಂಬ್ಯುಲೆನ್ಸ್ ಮೂಲಕ ಪುತ್ತೂರಿನಿಂದ ಮೈಸೂರಿಗೆ ಹೊರಟ 7 ಮಂದಿಯನ್ನು ಪುತ್ತೂರು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು. ಲಾಕ್‌ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಪುತ್ತೂರಿನ ಏಳು ಮಂದಿ ಆಂಬ್ಯುಲೆನ್ಸ್ ನಲ್ಲಿ ರಾತ್ರಿ ಮೈಸೂರು ಕಡೆ ಹೊರಟಿದ್ದರು. ಕೊಡಗು ಜಿಲ್ಲೆಯ ಕುಶಾಲನಗರ ಸರಹದ್ದಿನ ಕೊಪ್ಪದಲ್ಲಿ ಇವರನ್ನು ತಡೆದ ಪೊಲೀಸರು ತಪಾಸಣೆ ಮಾಡಿದಾಗ ಯಾವುದೇ ತುರ್ತು ಸೇವೆಗೆ ಹೋಗದೇ ಲಾಕ್‌ಡೌನ್‌ ನಿಯಮದಿಂದ […]

ಬೆಂಗಳೂರಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಓರ್ವ ಸಾವು

Saturday, October 6th, 2018
railway-track

ಬೆಂಗಳೂರು: ರೈಲಿಗೆ ಸಿಲುಕಿ ವ್ಯಕ್ತಿವೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶ್ಯಾಂ ಪುರ ರೈಲ್ವೆ ಕ್ರಾಸಿಂಗ್ ಬಳಿ ನಡೆದಿದೆ. ಕೆಜಿ ಹಳ್ಳಿ ಬಳಿಯ ಶ್ಯಾಂ ಪುರ ರೈಲ್ವೆ ಕ್ರಾಸಿಂಗ್ನಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಓರ್ವ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಟ್ರಾಫಿಕ್ ವಾರ್ಡನ್ಗಳು ಆಂಬ್ಯುಲೆನ್ಸ್ ಮೂಲಕ ಶವವನ್ನು ಆಸ್ಪತ್ರೆಗೆ ಶವ ರವಾನಿಸಿದ್ದಾರೆ.