18 ಸಾವಿರ ಬಾಡಿಗೆ ಕೊಟ್ಟಿಲ್ಲಎಂದು ಪುಟ್ ಪಾತ್ ಮೇಲೆ ಕೊರೋನ ರೋಗಿಯ ಶವ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ

Friday, May 28th, 2021
ambulance

ಬೆಂಗಳೂರು:  ಕೊರೋನ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಇಳಿಸಲು ಆಂಬ್ಯುಲೆನ್ಸ್ ಚಾಲಕ ಕುಟುಂಬದವರ ಬಳಿ 18 ಸಾವಿರ ರೂಪಾಯಿ ಹಣ ಕೇಳಿ, ಹಣ ಕೊಟ್ಟಿಲ್ಲ ಎಂದು ಶವವನ್ನ ಪುಟ್ ಪಾತ್ ಮೇಲೆ ಇಳಿಸಿ ಹೋದ ಘಟನೆ ಹೆಬ್ಬಾಳ ದಲ್ಲಿ ನಡೆದಿದೆ. ಚಾಲಕನನ್ನು ಶರತ್ ಗೌಡ ಎಂದು ಗುರುತಿಸಲಾಗಿದೆ. ಹೆಬ್ಬಾಳ ಚಿತಾಗಾರಕ್ಕೆ ಸೋಂಕಿತ ಮೃತ ವ್ಯಕ್ತಿಯ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿತ್ತು. ಮೃತರ ಪತ್ನಿಯ ಬಳಿ ಚಾಲಕ ಶರತ್ ಗೌಡ 18 ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದ. ಆಗ ಮೊದಲಿಗೆ 3 ಸಾವಿರ ರೂಪಾಯಿ […]

ತುಳುನಾಡ ರಕ್ಷಣಾ ವೇದಿಕೆ ಸದಸ್ಯರಿಂದ ಸಂಪಾಜೆ ನಿರಾಶ್ರೀತರಿಗೆ ಅಗತ್ಯ ಸಾಮಾಗ್ರಿ ವಿತರಣೆ

Friday, August 31st, 2018
TRV-sampaje

ಮಂಗಳೂರು : ತುಳುನಾಡ ರಕ್ಷಣಾ ವೇದಿಕೆ ಆಂಬ್ಯುಲೆನ್ಸ್ ಚಾಲಕ ಮಾಲಕರ  ಘಟಕದ ವತಿಯಿಂದ , ಘಟಕದ ಪ್ರಧಾನ ಕಾರ್ಯದರ್ಶಿ ರಾಧಿಕಾರವರ ನೇತ್ರತ್ವದಲ್ಲಿ ಸಂಪಾಜೆ ನಿರಾಶ್ರಿತರ ತಾಣದಲ್ಲಿ ಅಗತ್ಯ ಸಾಮಾಗ್ರಿಗಳಾದ ಬಟ್ಟೆ , ಅಕ್ಕಿ ತರಕಾರಿ ಹಾಗೂ ಇತರ ಸಾಮಾಗ್ರಿಗಳನ್ನು ಗುರುವಾರ ನೀಡಲಾಯಿತು. ಸ್ಥಾಪಕಾದ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, ಶಿವ್ ಶೆಟ್ಟಿ, ಭಾರ್ಗವಿ , ಸುನಿಲ್, ಸುಳ್ಯ ಘಟಕ ದ ಅದ್ಯಕ್ಷರಾದ ಪ್ರಶಾಂತ್ ರೈ ಮರವಂಜ, ಶ್ರೀಮತಿ ಪ್ರವೀಣ  ರೈ, ಮತ್ತಿತರ ತುರವೇ ಪ್ರಮುಖರು ಉಪಸ್ಥಿತರಿದ್ದರು.