ಆಕಸ್ಮಿಕ ಬೆಂಕಿ : ಕರಕಲಾದ ವಾಹನ

Friday, November 8th, 2019
virajpete

ಮಡಿಕೇರಿ : ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ವಾಹನವೇ ಕರಕಲಾದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ವೀರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದವರಾದ ನಂಬುಡುಮಾಡ ಮನು ಅವರು ಮೈಸೂರಿನಲ್ಲಿ ನೆಲೆಸಿದ್ದು, ಇವರು ಸಂಬಂಧಿಕರ ಮದುವೆಗೆಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು. ಇವರು ನಿನ್ನೆ ಸಂಜೆ ಕಂಡಂಗಾಲದಿಂದ ವೀರಾಜಪೇಟೆಯಲ್ಲಿ ಆಯೋಜಿತ ಮದುವೆಗೆ ಆಗಮಿಸುತಿದ್ದ ವೇಳೆ ಕಂಡಂಗಾಲ – ಬಿ.ಶೆಟ್ಟಿಗೇರಿ ಮುಖ್ಯ ರಸ್ತೆ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೆ ಮನು ಅವರು ವಾಹನದಿಂದಿಳಿದಿದ್ದಾರೆ. ಕ್ಷಣ ಮಾತ್ರದಲ್ಲಿ […]