ಹೊಸಪೇಟೆ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೈ ಕಾರ್ಯಕರ್ತರ ಆಕ್ರೋಶ

Friday, December 13th, 2019
Balaari

ಬಳ್ಳಾರಿ : ವಿಜಯನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಹಿನ್ನೆಲೆ ಹೊಸಪೇಟೆಯ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಕೈ ಕಾರ್ಯಕರ್ತರು ಆಕ್ರೋಶಗೊಂಡು ಬ್ಯಾನರ್ ಹರಿದುಹಾಕಿದ್ದಾರೆ. ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವೇದಿಕೆಗೆ ಹಾಕಲಾಗಿದ್ದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಗೂ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಇರುವ ಬ್ಯಾನರ್ ಹರಿದು ಹಾಕಿ ತಮ್ಮ ಆಕ್ರೋಶವನ್ನ ಹೊರ ಹಾಕಿದರು. ಸದ್ಯ ವಿಜಯನಗರ ಉಪ ಚುನಾವಣೆಯ ನಂತರ ಬಳ್ಳಾರಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ವಿಜಯನಗರ ಚುನಾವಣೆಯ ಸೋಲಿನ […]

ಮಹದಾಯಿ ಹೋರಾಟ: ಲಾಠಿ ಪ್ರಹಾರಕ್ಕೆ ಸಂಬಂಧಪಟ್ಟಂತೆ ಒಬ್ಬ ಇನ್‌ಸ್ಪೆಕ್ಟರ್‌, 9 ಜನ ಪೊಲೀಸರು ಅಮಾನತು

Wednesday, August 3rd, 2016
Yamanooru

ಹುಬ್ಬಳ್ಳಿ: ಮಹದಾಯಿ ಹೋರಾಟದ ವೇಳೆ ಯಮನೂರಲ್ಲಿ ನಡೆದ ಲಾಠಿ ಪ್ರಹಾರಕ್ಕೆ ಸಂಬಂಧಪಟ್ಟಂತೆ ಒಬ್ಬ ಇನ್‌ಸ್ಪೆಕ್ಟರ್‌ ಸೇರಿದಂತೆ 9 ಜನ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಲಾಠಿ ಚಾರ್ಜ್‌ನ ವಿಡಿಯೋ ಹಾಗೂ ಧಾರವಾಡ ಎಸ್ಪಿ ನೀಡಿರುವ ವರದಿ ಆಧರಿಸಿ ಬೆಳಗಾವಿ ಉತ್ತರ ವಲಯದ ಐಜಿಪಿ ಡಾ.ಕೆ. ರಾಮಚಂದ್ರ ರಾವ್‌ ಅವರು 9 ಜನರನ್ನು ಅಮಾನತುಗೊಳಿಸಿ ಮಂಗಳವಾರ ಆದೇಶಿಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಠಾಣಾಧಿಕಾರಿ ಅರುಣಕುಮಾರ ಹಪ್ಪಳಿ, ಇಬ್ಬರು ಪೇದೆಗಳು, ವಿಜಯಪುರ ಜಿಲ್ಲೆ ಇಬ್ಬರು, ಬೆಳಗಾವಿ ಜಿಲ್ಲೆಯ ನಾಲ್ವರು ಪೇದೆಗಳು ಸೇರಿ ಒಟ್ಟು […]

ಸಲಿಲಸಲಿಲ ಜಲ ಧಾರೆ- ಅದರಿಲ್ಲಿ ಬಾವಿಗೆ ಮಣ್ಣಿನ ಧಾರೆ

Sunday, February 21st, 2016
mogral

ಕುಂಬಳೆ: ಶತಮಾನಗಳಿಂದ ನೂರಾರು ಜನರಿಗೆ ನೀರುಣಿಸುತ್ತಿದ್ದ ಸಾರ್ವಜನಿಕ ಬಾವಿಯೊಂದಕ್ಕೆ ಮಣ್ಣು ತುಂಬಿಸಿ ಮುಚ್ಚಿದ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪೇರಾಲ್ ರಸ್ತೆ ಅಭಿವೃದ್ದಿಯ ಹೆಸರಲ್ಲಿ ರಸ್ತೆ ಹೆದ್ದಾರಿಯನ್ನು ಸಂಪರ್ಕಿಸುವಲ್ಲಿರುವ ಬಾವಿಯನ್ನು ಮಣ್ಣು ತುಂಬಿಸಿ ಮುಚ್ಚಲಾಗಿದೆ. 1913ರಲ್ಲಿ ಸಾರ್ವಜನಿಕರಿಗೆ,ದಾರಿ ಹೋಕರಿಗೆ ನೀರಡಿಕೆಯನ್ನು ತಣಿಸಲು ಅಂದಿನ ಆಡಳಿತ ನಿರ್ಮಿಸಿದ್ದ ಶತಮಾನದ ಬಾವಿಯನ್ನು ಅಭಿವೃದ್ದಿಯ ಹೆಸರಲ್ಲಿ ಮುಚ್ಚಿರುವುದು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಪ್ರಾಕೃತಿಕ ಅಸಮತೋಲನದಿಂದ ಹದಗೆಟ್ಟ ವಾತಾವರಣದಲ್ಲಿ ಏರುತ್ತಿರುವ ಉಷ್ಣಾಂಶ ಹಾಗೂ ಕುಸಿಯುತ್ತಿರುವ ನೀರ ಸೆಲೆಗಳ ತೀವ್ರ ಆತಂಕಕಾರಿ ಸ್ಥಿತಿಯಲ್ಲೂ […]