ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ ಪ್ರಸ್ತಾಪಗಳು ಸರಕಾರದ ಮುಂದಿಲ್ಲ: ಶಾಸಕ ಕಾಮತ್ ಸ್ಪಷ್ಟನೆ

Wednesday, September 16th, 2020
Income tax Road

ಮಂಗಳೂರು: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತಗೊಳಿಸುವ ಅಥವಾ ಗೋವಾದ ಕಚೇರಿ ಜತೆಯಲ್ಲಿ ವಿಲೀನಗೊಳಿಸುವ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನ ಆದಾಯ ತೆರಿಗೆ ಕಚೇರಿಯಲ್ಲಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಹುದ್ದೆ ಇದೆ. ಅದೇ ರೀತಿ ಗೋವಾದಲ್ಲೂ ಪ್ರಧಾನ ಆಯುಕ್ತರ ಹುದ್ದೆ ಇದೆ. ಈ ಎರಡು ಕಚೇರಿಯ ಹುದ್ದೆಯನ್ನು ಸೇರಿಸಿ ಒಂದೇ ಪ್ರಧಾನ ಆಯುಕ್ತರನ್ನು ನಿಯೋಜನೆ ಮಾಡಬೇಕು ಎಂಬ ಪ್ರಸ್ತಾಪ ಇದೆ. […]

ಆದಾಯ ತೆರಿಗೆ ಕಚೇರಿ ಮಂಗಳೂರಿನಿಂದ ತೆರವುಗೊಳಿಸದಂತೆ ನಿರ್ಮಲಾ ಸೀತಾರಾಮನ್ ಗೆ ಮನವಿ

Sunday, September 6th, 2020
nalinKumar

ಮಂಗಳೂರು: ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಗೋವಾದೊಂದಿಗೆ ವಿಲೀನ ಮಾಡದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರ (ಆಡಳಿತ) ಕಚೇರಿಯನ್ನು ಗೋವಾದ ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯೊಂದಿಗೆ ವಿಲೀನಗೊಳಿಸಲಾಗುತ್ತಿರುವ ವಿಷಯವು ಕರಾವಳಿ ಕರ್ನಾಟಕದ ಉದ್ಯಮಿಗಳಲ್ಲಿ ಹಾಗೂ ವೃತ್ತಿಪರ ಚಾರ್ಟರ್ಡ್ ಅಕೌಂಟೆಂಟ್ ಗಳಲ್ಲಿ ಸಂಪೂರ್ಣ ಅಸಮಾಧಾನವನ್ನುಂಟು ಮಾಡಿದ್ದು, ಆದಾಯ ತೆರಿಗೆ ಪ್ರಧಾನ […]