ನಾಥ ಪಂಥದ ಗುರು ಹಾಗೂ ಹಿಂದೂ ಧರ್ಮದ ನಿಂದನೆ ಯುವ ಕಾಂಗ್ರೆಸ್​ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು

Saturday, October 10th, 2020
Mithun-Rai

ಪುತ್ತೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ, ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಿಥುನ್ ರೈ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ. ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ […]

ಮಕ್ಕಳಿಗೆ ಆಕ್ಸಿಜನ್ ಪೂರೈಸಲಾಗದ ಆದಿತ್ಯನಾಥ್ : ಎಚ್ ಡಿಕೆ ವಾಗ್ದಾಳಿ

Wednesday, March 7th, 2018
kumarswamy

ಮಂಗಳೂರು: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಲ್ಲಿನ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳಿಗೆ ಆಕ್ಸಿಜನ್ ಪೂರೈಸಲು ಆಗಲಿಲ್ಲ. ರಾಜ್ಯದಲ್ಲಿ ಸುರಕ್ಷತೆ ಸಂದೇಶ ಕೊಡಲು ಇಲ್ಲಿಯ ಬಿಜೆಪಿಯ ನಾಯಕರು ಅವರನ್ನು ಕರೆಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಅವರು ಮಾತನಾಡಿ, ರಾಜ್ಯದ ಬಿಜೆಪಿ ನಾಯಕರು ಭೋಗಿಗಳಾಗಿದ್ದಕ್ಕೆ, ಯೋಗಿ ಆದವರನ್ನು ರಾಜ್ಯಕ್ಕೆ ಕರೆಸಿದ್ದಾರೆ. ವಿಧಾನಸೌಧದಲ್ಲಿ ನೀಲಿ ಚಿತ್ರಗಳನ್ನು ನೋಡಿ ಬಿಜೆಪಿಯ ಕೆಲವರು ಭೋಗಿಗಳಾಗಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ […]

ಗೋಡ್ಸೆ ಅನುಯಾಯಿ ಆದಿತ್ಯನಾಥ್ ರಿಂದ ನಮಗೆ ಪಾಠ ಬೇಡ: ಸಿದ್ದರಾಮಯ್ಯ

Monday, January 8th, 2018
congress-war

ಉಡುಪಿ: ಕಲ್ಲಡ್ಕ ಪ್ರಭಾಕರ ಭಟ್ ಶಾಲೆಗೆ ಮಾತ್ರ ಏಕೆ ಊಟ, ಬೇರೆ ಶಾಲೆಗಳಿಗೂ ಕೊಡಬಹುದಲ್ಲಾ? ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಾಫ್ಟ್ ಹಿಂದುತ್ವ ಅಂದರೆ ಏನು? ಈ ಸಾಫ್ಟ್, ಹಾರ್ಡ್ ಏನೂ ಇಲ್ಲ. ನಾನು ದೇವಸ್ಥಾನಗಳಿಗೆ ಹೋಗುತ್ತೇನೆ. ಹಾಗಂತ ಎಲ್ಲಾ ದೇವಸ್ಥಾನಕ್ಕೆ ಹೋಗಲ್ಲ. ಕೃಷ್ಣಮಠಕ್ಕೆ ಹೋಗದೇ ಇರೋದು ದೊಡ್ಡ ವಿಷಯ ಅಲ್ಲ ಎಂದು ತಮ್ಮ ವಿರುದ್ಧ ಆರೋಪಗಳಿಗೆ ಉತ್ತರಿಸಿದರು. ಕರಾವಳಿಯಲ್ಲಿ ಉಲ್ಬಣವಾಗಿರುವ ಕೋಮು ಸಂಘರ್ಷಕ್ಕೆ ಕೋಮುವಾದಿ […]