ಸುಪ್ರೀಂಕೋರ್ಟ್ ನಲ್ಲಿ ಅನರ್ಹ‌ ಶಾಸಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ : ಕೆ.ಎಸ್.ಈಶ್ವರಪ್ಪ

Saturday, September 28th, 2019
eshwarappa

ಶಿವಮೊಗ್ಗ : ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಯಾರಿಗೂ ಗೊತ್ತಿಲ್ಲ. ಅವರು ಅನರ್ಹರು ಅಂತ ನಾನಲ್ಲ, ದೇವರೇ ಬಂದು ಹೇಳಿದರೂ ಆಗಲ್ಲ. ಅದನ್ನು ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು‌ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಹೇಳಿದರು. ಸುಪ್ರೀಂಕೋರ್ಟ್ ಅಂದಿನ‌ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಾಸಕರ ರಾಜೀನಾಮೆ ಅಂಗೀಕಾರ ಮಾಡ್ತೀರಾ, ಇಲ್ಲ ತಿರಸ್ಕಾರ ಮಾಡ್ತೀರಾ ಅಂತ ಕೇಳಿತ್ತು. ಆದ್ರೆ ರಮೇಶ್ ಕುಮಾರ್ ಎರಡನ್ನು ಬಿಟ್ಟು‌ ಸಿದ್ದರಾಮಯ್ಯನವರ ಮಾತು ಕೇಳಿ ಶಾಸಕರನ್ನು ಅನರ್ಹರನ್ನಾಗಿ […]

ಬಳ್ಳಾರಿಯಲ್ಲಿನ ಅಕ್ರಮ ಗಣಿಗಾರಿಕೆ..ರೆಡ್ಡಿ ಸೇರಿ 30ಕ್ಕೂ ಹೆಚ್ಚು ಮಂದಿ ಕೋರ್ಟ್​ಗೆ ಹಾಜರು!

Thursday, June 28th, 2018
janardhan-reddy

ಬೆಂಗಳೂರು: ಬಳ್ಳಾರಿಯಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ, ಆನಂದ್ ಸಿಂಗ್, ಸುರೇಶ್ ಬಾಬು ಮತ್ತು ಸತೀಶ್ ಸೈಲ್ ಸೇರಿದಂತೆ 30 ಕ್ಕೂ ಹೆಚ್ಚು ಆರೋಪಿತರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸಿಟಿ ಸಿವಿಲ್ ಕೋರ್ಟ್ನಲ್ಲಿರುವ ಹಾಲ್ ನಂಬರ್ 80 ರಲ್ಲಿ ಈ ವಿಚಾರಣೆ ನಡೆಯಿತು. ಕೇಸಿಗೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಕರಣದ ವಿಚಾರಣೆ ಇತ್ತೀಚೆಗಷ್ಟೇ ಸಿಬಿಐ ಕೋರ್ಟ್ನಿಂದ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರ್ಗವಾಗಿದೆ. ಕೇಸಿಗೆ ಸಂಬಂಧಿಸಿದಂತೆ […]

ಯಾರಿಗೂ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ: ಆನಂದ್‌ ಸಿಂಗ್‌ಗೆ ಡಿಕೆಶಿ ಮನವರಿಕೆ?

Tuesday, May 22nd, 2018
anand-singh

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮೂರು ತಿಂಗಳ ಮೊದಲು ಬಿಜೆಪಿ ಬಿಟ್ಟು ಕಾಂಗ್ರೆಸ್‌‌ ಸೇರಿಕೊಂಡು, ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್‌ಗೆ ಕಾಂಗ್ರೆಸ್‌ ಮುಖಂಡ ಡಿಕೆಶಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಹಿಲ್ಟನ್‌ ಹೋಟೆಲ್‌ನಲ್ಲಿ ತಂಗಿರುವ ಕಾಂಗ್ರೆಸ್‌ ನಾಯಕರ ಭೇಟಿಗೆ ತೆರಳಿದ್ದ ಡಿಕೆಶಿ, ಶಾಸಕ ಆನಂದ್‌ ಸಿಂಗ್‌ ಜತೆಗೆ ಪ್ರತ್ಯೇಕ ಮಾತುಕತೆ ನಡೆಸಿದರು. ನಿಮಗೆ ಯಾವುದೇ ಬೆದರಿಕೆ ಬಂದರೂ ನಿಮ್ಮ ಬೆಂಬಲಕ್ಕೆ ಇರುತ್ತೇವೆ. ನೀವು ಭಯಪಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆನಂದ್‌ […]

ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ವಿಧಾನಸೌಧಕ್ಕೆ ಆಗಮನ..!

Saturday, May 19th, 2018
anand-singh-cngrs

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಶಾಸಕ ಆನಂದ್ ಸಿಂಗ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ವಿಶ್ವಾಸಮತ ಯಾಚನೆಗೆ ಸಮಯ ನಿಗದಿಯಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧ ಆವರಣಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಆನಂದ್ ಸಿಂಗ್ ಅವರನ್ನು ಕೈಹಿಡಿದುಕೊಂಡು ಡಿಕೆಶಿ ವಿಧಾನಸಭೆಗೆ ಕರೆದೊಯ್ದರು. ವಿಧಾನಸೌಧದೊಳಕ್ಕೂ ಡಿಕೆಶಿ ಕೈಹಿಡಿದುಕೊಡೇ ಸಾಗಿದ ಶಾಸಕ ನಾಗೇಂದ್ರ ಅವರು ಹಿರಿಯ ಕಾಂಗ್ರೆಸ್ ಮುಖಂಡರಿಗೆ ವಿಶ್ ಮಾಡಿದರು. ಬಳಿಕ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಿಗೂ ವಿಶ್ ಮಾಡಿ ನಾನಿದ್ದೇನೆ ಎಂದು […]

ಸದನದಲ್ಲಿ ನಮಗೆ ಬಹುಮತ ಸಾಬೀತಾಗುವುದು ಖಚಿತ: ಡಿ.ಕೆ. ಶಿವಕುಮಾರ್

Saturday, May 19th, 2018
shivkumar

ಬೆಂಗಳೂರು: ನಮ್ಮ ಎಲ್ಲಾ ಶಾಸಕರೂ ಕಾಂಗ್ರೆಸ್ ಪರವಾಗಿ ಓಟ್ ಮಾಡಲಿದ್ದಾರೆ. ಸದನದಲ್ಲಿ ನಮಗೆ ಬಹುಮತ ಸಾಬೀತಾಗುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರತಾಪ್ ಗೌಡ, ಆನಂದ್ ಸಿಂಗ್ ಅವರನ್ನು ಯಾರು ಕರ್ಕೊಂಡು ಹೋಗಿದ್ದಾರೆ ಎಂದು ನಾನು ನನ್ನ ಬಾಯಲ್ಲಿ ಹೇಳುವುದಿಲ್ಲ. ಆನಂದ್ ಸಿಂಗ್ ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ. ನಮ್ಮ ಪರವಾಗಿ ಮತ ಹಾಕಲಿದ್ದಾರೆ ಎಂದು ಹೇಳಿದರು. ಪ್ರತಾಪ್ ಗೌಡ ಪಾಟೀಲ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರತಾಪ್ […]

ಗೈರಾಗಿರುವ ಶಾಸಕರನ್ನು ಅವರೇ ಕರೆ ತರ್ತಾರೆ… ನಮ್ಮಲ್ಲೂ ರಣತಂತ್ರ ಸಿದ್ಧ: ಡಿ.ಕೆ.ಶಿವಕುಮಾರ್

Saturday, May 19th, 2018
D-k-shivkumar

ಬೆಂಗಳೂರು: ವಿಧಾ‌ಸಭೆಯಲ್ಲಿ ಕಾಂಗ್ರೆಸ್‌ನ ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಇಲ್ಲ. ಆದರೆ ನಾವು ಅವರ ಸಂಪರ್ಕದಲ್ಲಿದ್ದು, ಅವರು ನಮ್ಮ ಪರವಾಗಿಯೇ ಮತ ಚಲಾಯಿಸಲಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಬ್ಬರು ಶಾಸಕರನ್ನು ಬಿಟ್ಟು ಎಲ್ಲಾ ಶಾಸಕರೂ ಸದನದಲ್ಲಿ ಹಾಜರಿದ್ದಾರೆ. ಅವರನ್ನು ಯಾರು ಕರೆದುಕೊಂಡು ಹೋಗಿದ್ದಾರೋ ಅವರೇ ಕರೆದುಕೊಂಡು ಬರಲಿದ್ದಾರೆ. ಆದರೆ ಅವರು ಯಾವ ಪಕ್ಷದಿಂದ ಆಯ್ಕೆಯಾಗಿದ್ದಾರೋ ಆ ಪಕ್ಷದ‌ ಪರ ಇರಲಿದ್ದಾರೆ ಎಂದರು. ಬಿಜೆಪಿಯ ಸೋಮಶೇಖರ […]

ಆನಂದ್ ಸಿಂಗ್, ಪ್ರತಾಪ್ ಗೌಡ ಮಧ್ಯಾಹ್ನ ಸದನಕ್ಕೆ ಹಾಜರ್?

Saturday, May 19th, 2018
anand-singh

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಮೂರು ದಿನದ ಅಧಿಕಾರದ ಅಳಿವು ಉಳಿವಿನ ಇಂದಿನ ಸಂದರ್ಭದಲ್ಲಿ ಕಣ್ಮರೆಯಾಗಿರುವ ಇಬ್ಬರು ಶಾಸಕರು ಎಲ್ಲಿದ್ದಾರೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಕಣ್ಮರೆಯಾಗಿರುವ ಶಾಸಕರು ಸದ್ಯ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಇರಬಹುದು ಎಂದು ಊಹಿಸಲಾಗುತ್ತಿದೆ. ಇವರಿಬ್ಬರೂ ಮಧ್ಯಾಹ್ನ 1 ಗಂಟೆಗೆ ಸದನಕ್ಕೆ ಆಗಮಿಸಬಹುದು, ಅವರನ್ನು ಕರೆತರಲು ಮಾಜಿ ಸಚಿವ ಎಂ.ಬಿ.ಪಾಟೀಲ್ ತೆರಳಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಮಸ್ಕಿ ಶಾಸಕ ಪ್ರತಾಪ್ ಗೌಡ ಮೂರನೇ […]

ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ… ಕಲಾಪಕ್ಕೆ ಇಬ್ಬರು ಶಾಸಕರು ಗೈರು..!

Saturday, May 19th, 2018
yedeyurappa

ಬೆಂಗಳೂರು: ಬಿಜೆಪಿ ಸರ್ಕಾರ ಬಹುಮತವನ್ನು ಸದನದಲ್ಲಿ ಇಂದು ಸಂಜೆ 4ಗಂಟೆಗೆ ಸಾಬೀತುಪಡಿಸಿಲು ಸುಪ್ರೀಂ ಕೋರ್ಟ್‌ ಆದೇಶಿಸಿದ್ದು, ಇಂದು ರಾಜಕೀಯ ಬೆಳವಣಿಗಳು ತೀವ್ರಗೊಂಡಿವೆ. ಮೂರು ಪಕ್ಷಗಳು ಮ್ಯಾಜಿಕ್‌ ನಂಬರ್‌‌ ಗೇಮ್‌ಗಾಗಿ ತಮ್ಮ ರಾಜಕೀಯ ಪಟ್ಟುಗಳನ್ನು ಪ್ರಯೋಗಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರಾದ ಆನಂದ್‌ ಸಿಂಗ್‌, ಪ್ರತಾಪ್‌‌ ಗೌಡ ಪಾಟೀಲ್‌ ಸದನಕ್ಕೆ ಗೈರಾಗಿದ್ದಾರೆ. 10.14 : ಒಮ್ಮೆಗೆ 10 ಶಾಸಕರಂತೆ ಪ್ರಮಾಣವಚನ ಸ್ವೀಕಾರ ಮುಂದುವರಿಕೆ 11.13: ಮೊದಲ ಹಂತದಲ್ಲಿ 10 ಮಂದಿ ಶಾಸಕರಿಂದ ಪ್ರಮಾಣವಚನ ಸ್ವೀಕಾರ 11.12 : ಸದನದಲ್ಲಿ ಶಾಸಕರಿಂದ ಪ್ರಮಾಣವಚನ […]

ಆನಂದ್ ಸಿಂಗ್ ಮರಳಿ ಬಿಜೆಪಿ ತೆಕ್ಕೆಗೆ , ಕುತೂಹಲ ಮೂಡಿಸಿದೆ ನಡೆ..!

Thursday, May 17th, 2018
anand-singh

ಬೆಂಗಳೂರು: ರಾಜ್ಯ ಸರ್ಕಾರ ರಚನೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನ ಕಸರತ್ತು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಪಕ್ಷಗಳಿಗೆ ಆಪರೇಷನ್ ಭೀತಿ ಎದುರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಶಾಸಕರನ್ನು ಆಪರೇಷನ್ ಗೆ ಒಳಗಾಗದಂತೆ ರೆಸಾರ್ಟ್ ಮತ್ತು ಹೋಟೆಲ್ ಗಳಲ್ಲಿ ಕೂಡಿಹಾಕಿವೆ. ಇದರ ನಡುವೆ ಫಲಿತಾಂಶ ಪ್ರಕಟಗೊಂಡಂದಿನಿಂದ ನಾಪತ್ತೆಯಾಗಿರುವ ಶಾಸಕ ಆನಂದ್ ಸಿಂಗ್ ಬಗ್ಗೆ ವ್ಯಾಪಕ ಕುತೂಹಲ ಮೂಡಿದೆ. ಆನಂದ್ ಸಿಂಗ್ ಮರಳಿ ಬಿಜೆಪಿ ತೆಕ್ಕೆಗೆ ಮರಳಿದ್ದಾರೆ ಎನ್ನುವ ಮಾತುಗಳು ರಾಜಕೀಯವ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ. ಚುನಾವಣಾ […]

ಬೇರೆ ಪಕ್ಷಗಳ ಇಪ್ಪತ್ತು ಶಾಸಕರು ‘ಕೈ’ ಸೇರ್ತಾರೆ, ನೋಡ್ತಿರಿ ಎಂದ ಪರಂ

Saturday, February 10th, 2018
perameshwar

ಬಳ್ಳಾರಿ : ಇಂದಿನ (ಶನಿವಾರ) ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಆನಂದ್ ಸಿಂಗ್ ಹಾಗೂ ನಾಗೇಂದ್ರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇತರ ಪಕ್ಷಗಳ ಇಪ್ಪತ್ತು ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆ ಆಗಲಿದ್ದಾರೆ ಎಂದು ಮತ್ತೊಮ್ಮೆ ಹುಳ ಬಿಟ್ಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ. ಈ ಹಿಂದೆ ಕೂಡ ಹಲವು ಬಾರಿ ಈ ಬಗ್ಗೆ ಮಾತನಾಡಿದ್ದ ಅವರು, ಶನಿವಾರ ಬಳ್ಳಾರಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬೇರೆ ಪಕ್ಷಗಳ ಇಪ್ಪತ್ತು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ರಾಜ್ಯದಲ್ಲಿ ನಾವು ಮತ್ತೆ […]