ರಾಜ್ಯೋತ್ಸವ ಪ್ರಶಸ್ತಿಗೆ ಆನ್ ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸು ಮಾಡಬಹುದು- ಸುನಿಲ್ ಕುಮಾರ್

Saturday, September 25th, 2021
Sunil Kumar V

ಬೆಂಗಳೂರು :  ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಈ ಬಾರಿಯ ವಿಶೇಷವೆಂದರೆ ,ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೇ ಅವಕಾಶ ಕಲ್ಪಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ […]

ದಕ್ಷಿಣ ಕನ್ನಡದಲ್ಲಿ18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭ

Tuesday, May 11th, 2021
vaccination

ಮಂಗಳೂರು :  ದ.ಕ. ಜಿಲ್ಲೆಯಲ್ಲಿ ಮಂಗಳವಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಹಂತವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಹಾಗೂ ನಾಲ್ಕು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಮಂಗಳವಾರ ಲಸಿಕೆ ನೀಡಲಾಗುತ್ತಿದೆ. ಮಂಗಳವಾರ ವೆನ್ಲಾಕ್ ನಲ್ಲಿ  250 ಮಂದಿ 18 ರಿಂದ 44 ವರ್ಷದವರಿಗೆ ಆನ್ ಲೈನ್  ನೋಂದಣಿ ಪಡೆದವರಿಗೆ ಲಸಿಕೆ ನೀಡಲಾಗುತ್ತಿದ್ದು ಯುವಕರು ಉತ್ಸಾಹದಿಂದ ಕೇಂದ್ರಕ್ಕೆ ಲಸಿಕೆ ಪಡೆಯಲು ಬರುತ್ತಿದ್ದಾರೆ ಎಂದು ಕೋವಿಡ್ ಲಸಿಕೀಕರಣದ ಜಿಲ್ಲಾ […]

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Sunday, October 4th, 2020
online Bajane

ಉಜಿರೆ: ಧರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟ ದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು. ಧರ್ಮಸ್ಥಳದಲ್ಲಿ ದೇವರ ಅಪ್ಪಣೆ […]

ಆನ್ ಲೈನ್ ನಲ್ಲಿ ಕಾರು ವಂಚನೆ ಪ್ರಕರಣ; ಇಬ್ಬರು ಆರೋಪಿಗಳ ಸೆರೆ

Friday, August 2nd, 2019
online car

ಉಡುಪಿ : ಆನ್ ಲೈನ್ ನಲ್ಲಿ ಮಾರಾಟಕ್ಕೆ ಇಟ್ಟ ಕಾರುಗಳನ್ನು ಪಡೆದು ವಂಚಿಸುತ್ತಿದ್ದ ಆರೋಪಿಗಳಿಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ಇವರಿಂದ 39ಲಕ್ಷ ರೂ. ಮೌಲ್ಯದ ಒಟ್ಟು ಐದು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೀಸ್ ಹಾಗೂ ಓಎಲ್‌ಎಕ್ಸ್‌ನಲ್ಲಿ ಗ್ರಾಹಕರು ಪ್ರಕಟಿಸುತ್ತಿದ್ದ ಕಾರುಗಳನ್ನು ಲಪಟಾಯಿಸಿ ಇವರು ವಂಚಿಸುತ್ತಿದ್ದರು. ಮಂಗಳೂರು ಪಡ್ಪು ಬಜಾಲ್ ಕಲ್ಲಕಟ್ಟೆ ನಿವಾಸಿ ಅಬ್ದುಲ್ಲ ಅಬ್ಬಾಸ್ (33), ಬಂಟ್ವಾಳ ತಾಲೂಕಿನ ವಿಟ್ಲ ಮೈರಾ ಕೇಪು ಗ್ರಾಮದ ಮುಹಮ್ಮದ್ ಸಫಾನ್ (22) ಬಂಧಿತ ಆರೋಪಿಗಳು. ಅಬ್ದುಲ್ಲ ಅಬ್ಬಾಸ್ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕೊಲೆ […]