ಕಾರು ಢಿಕ್ಕಿ; ಐದು ಮಂದಿಗೆ ಗಾಯ

Friday, February 2nd, 2018
manjeshwara

ಮಂಜೇಶ್ವರ: ಆರಿಕ್ಕಾಡಿಯಲ್ಲಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.ರಾಷ್ಟ್ರೀಯ ಹೆದ್ದಾರಿ 66 ಆರಿಕ್ಕಾಡಿ ಬಳಿ ಶುಕ್ರವಾರ ಅಪಘಾತ ಸಂಭವಿಸಿದೆ. ಆಲ್ಟೋ ಕಾರನ್ನು ರಸ್ತೆ ಬದಿಯ ಮರದಡಿಯಲ್ಲಿ ನಿಲ್ಲಿಸಿ ಸಮೀಪದ ಹೋಟೆಲೊಂದಕ್ಕೆ ಉಪಹಾರಕ್ಕೆ ತೆರಳಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಬಂದ ಸ್ವಿಫ್ಟ್ ಕಾರು, ನಿಲ್ಲಿಸಿದ್ದ ಆಲ್ಟೋ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ವಿಫ್ಟ್ ನಲ್ಲಿದ್ದ 5 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ […]

ರಿಕ್ಷಾ – ಲಾರಿ ನಡುವೆ ನಡೆದ ಅಪಘಾತ, ಆಟೊ ಚಾಲಕ ಮೃತ

Saturday, November 11th, 2017
kiran

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಆಟೊ ರಿಕ್ಷಾ – ಲಾರಿ ನಡುವೆ ನಡೆದ ಅಪಘಾತದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕುಂಬಳೆ ಶಾಂತಿಪಳ್ಳದ ಕಿರಣ್ ( 29) ಎಂದು ಗುರುತಿಸಲಾಗಿದೆ. ಕಾಸರಗೋಡು ಕಡೆಯಿಂದ ಮಂಗಳೂರು ನತ್ತ ತೆರಳುತ್ತಿದ್ದ ಲಾರಿ ಮತ್ತು ಕುಂಬಳೆ ಕಡೆಗೆ ಹೋಗುತ್ತಿದ್ದ ರಿಕ್ಷಾ ನಡುವೆ ಅಪಘಾತ ನಡೆದಿದೆ. ಅಪಘಾತದಿಂದ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ಕಿರಣ್ ರನ್ನು ಕುಂಬಳೆ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.