ಮಂಗಳೂರಿನಲ್ಲಿ 13 ಮಂದಿಯಲ್ಲಿ ಕೋವಿಡ್ ಸೋಂಕು

Friday, December 29th, 2023
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರ 348 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 13 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಅಲ್ಲದೆ 25 ಸಕ್ರಿಯ ಪ್ರಕರಣದ ವರದಿ ಪ್ರಕಟವಾಗಿದೆ. ಪಾಸಿಟಿವ್‌ಗೊಳಗಾದ 13 ಮಂದಿಯ ಪೈಕಿ ಒಬ್ಬರು ನಗರದ ಖಾಸಗಿ ಆಸ್ಪತ್ರೆ ಮತ್ತು 12 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಆರು ಮಂದಿ ಮಹಿಳೆಯರು ಮತ್ತು ಏಳು ಮಂದಿ ಪುರುಷರಿದ್ದಾರೆ. 27ರಿಂದ 84 ವರ್ಷ ಪ್ರಾಯದವರೂ ಇದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಅರ್ಹತೆ ಇಲ್ಲದವರು ‘ಲೈಂಗಿಕ ಸಮಸ್ಯೆಗಳಿಗೆ ಪರಿಹಾರ’ ಕ್ಲಿನಿಕ್ ನಡೆಸುವಂತಿಲ್ಲ

Wednesday, November 29th, 2023
sex-problem

ಮಂಗಳೂರು : ವೈದ್ಯಕೀಯ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಸೇವೆಗಳನ್ನು ನೀಡುವ ವ್ಯಕ್ತಿ ಮತ್ತು ಸಂಸ್ಥೆಗಳು ಆರೋಗ್ಯ ಇಲಾಖೆಯಲ್ಲಿ ನೋಂದಣಿಗೊಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ. ಅವರು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಡೆಂಟಲ್, ಆಯುಷ್, ಹೋಮಿಯೋಪಥಿ, ಫಿಸಿಯೋಥೆರಿಪಿ, ನ್ಯಾಚುರೋಪತಿ ಸೇರಿದಂತೆ ವ್ಯೆದ್ಯಕೀಯ ಸೇವೆ ನೀಡುವ ಪ್ರತಿಯೊಂದು ಕ್ಲಿನಿಕ್, ಆಸ್ಪತ್ರೆ ಮತ್ತು ವ್ಯಕ್ತಿಗಳು, ಪ್ರಯೋಗಾಲಯ, ಪರೀಕ್ಷಾ ಕೇಂದ್ರಗಳು, ಅಲ್ಟ್ರಾಸೌಂಡ್ ಸಂಸ್ಥೆಗಳು […]

ವ್ಯಾಪಾರ ಮಾಡಲು ಕಾರ್ಡ್‌ ಇದ್ದರೂ, ಫುಟ್‌ಪಾತ್‌ ಗೂಡಂಗಡಿಗಳನ್ನು ತೆರವುಗೊಳಿಸಿದ ಪಾಲಿಕೆ

Thursday, December 23rd, 2021
petty-shop

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಗೂಡಂಗಡಿಗಳ ತೆರವು ಕಾರ್ಯಾಚರಣೆ ಗುರುವಾರ ಆರಂಭವಾಗಿದೆ. ಮೇಯರ್‌ ಹಾಗೂ ಆಯುಕ್ತರ ಸೂಚನೆಯಂತೆ ಕಂದಾಯ, ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರದ ಸ್ಟೇಟ್‌ಬ್ಯಾಂಕ್‌ ಭಾಗದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮುಂದಕ್ಕೆ ಸೆಂಟ್ರಲ್‌ ಮಾರುಕಟ್ಟೆ, ಕಂಕನಾಡಿ ಭಾಗದಲ್ಲಿ ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿದ್ದಾರೆ. ಕಾರ್ಯಾಚರಣೆಗೆ ವ್ಯಾಪಾರಿಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ತಮ್ಮ ಬಳಿ ಬೀದಿಬದಿ ವ್ಯಾಪಾರ ಮಾಡಲು ಪಾಲಿಕೆ ನೀಡಿರುವ ಕಾರ್ಡ್‌ […]

ಕೋವಿಡ್-19 ಸೋಂಕಿನ ಸಂಭಾವ್ಯ ಮೂರನೇ ಅಲೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Saturday, July 24th, 2021
KV Rajendra

ಮಂಗಳೂರು : ಕೋವಿಡ್-19 ಸೋಂಕಿನ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ತಂಡಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದು, ಸಂಭಾವ್ಯ ಮೂರನೇ ಅಲೆ ಎದುರಾದಲ್ಲೀ ಅದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು. ಅವರು ಜು.23ರ ಶುಕ್ರವಾರ ನಗರದ ವೆನ್‍ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ […]

ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣಾ ಕಾರ್ಯದಲ್ಲಿ ಆರೋಗ್ಯ ಇಲಾಖೆಯ ಕಾರ್ಯ ಮಹತ್ವದ್ದು: ವಿ. ಪೊನ್ನುರಾಜ್

Tuesday, May 25th, 2021
Ponnuraj

ಮಂಗಳೂರು : ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ವೈದ್ಯಕೀಯ ಸಿಬ್ಬಂದಿಗಳು ವಿಳಂಬವಿಲ್ಲದೇ ಶೀಘ್ರದಲ್ಲಿ ತಮ್ಮ ತಮ್ಮ ಕಾರ್ಯಗಳನ್ನು ನಿರ್ವಹಿಸಿದಾಗ ಮಾತ್ರ ಕೋವಿಡ್ ಸೋಂಕು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್‍ನ ಕೆಸ್ವಾನ್ ವೀಡಿಯೋ ಕಾನ್ಫ್‍ರೆನ್ಸ್ ಹಾಲ್‍ನಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ದೈನಂದಿನ ಸ್ವ್ಯಾಬ್ ಸಂಗ್ರಹ, ಅವುಗಳ ರವಾನೆ, ಪರೀಕ್ಷೆಯ ಫಲಿತಾಂಶ ನಂತರದಲ್ಲಿ ಸೋಂಕು ದೃಢಪಟ್ಟವರ ಪ್ರಾಥಮಿಕ […]

ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆ, ಸ್ಥಳೀಯರಲ್ಲಿ ಆತಂಕ

Friday, March 12th, 2021
Monkey death

ಬೆಳ್ತಂಗಡಿ : ಕಾಯರ್ತೋಡಿ ಸಮೀಪವಿರುವ ಸೀಟ್ ರಕ್ಷಿತಾರಣ್ಯದಲ್ಲಿ ಇಂದು ಬೆಳಗ್ಗೆ ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಡಾಜೆ ಗ್ರಾಮದಲ್ಲಿ ನಡೆದ  ಘಟನೆಯ  ಕುರಿತು ಸ್ಥಳೀಯರು ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯತ್ ಗೆ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಇಲಾಖಾ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸರಕಾರದ ಆರೋಗ್ಯ ಇಲಾಖೆಯ ವೈಫಲ್ಯತೆ ಮೈಸೂರು ವೈದ್ಯಾಧಿಕಾರಿಯನ್ನು ಬಲಿ ಪಡೆದಿದೆ

Saturday, August 22nd, 2020
dyfi

ಮಂಗಳೂರು  : ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳಿಗೆ ಕೊರೊನಾ ಪ್ರಕರಣ ನಿಭಾಯಿಸಲು ವೈದ್ಯರು ಸಹಿತ ನುರಿತ ಸಿಬ್ಬಂಧಿಗಳ ವ್ಯವಸ್ಥೆ ಮಾಡದೆ ಬರೇ ಇರುವ ವೈದ್ಯರುಗಳಿಂದಲೇ ವಿಪರೀತ ಕೆಲಸಗಳನ್ನು ನಿರ್ವಹಿಸಿದ ಕಾರಣ ಒತ್ತಡಕ್ಕೆ ಸಿಲುಕಿದ ವೈದ್ಯರು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಯ ನಿರ್ಮಾಣ ಇದು ಸರಕಾರದ ಆರೋಗ್ಯ ಇಲಾಖೆಯ ವೈಫಲ್ಯತೆ. ಮೈಸೂರಿನ ತಾಲೂಕು ವೈದ್ಯಾಧಿಕಾರಿ ಡಾ ನಾಗೇಂದ್ರ ಅವರನ್ನು ಬಲಿಪಡೆದಿದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಇಂದು ಉರ್ವಸ್ಟೋರ್ ನಲ್ಲಿ ಡಿವೈಎಫ್ಐ ನೇತೃತ್ವದಲ್ಲಿ ನಡೆದ ಸರಕಾರಿ […]

ಕೊರೋನ ಸೋಂಕು ರವಿವಾರ : ದಕ್ಷಿಣ ಕನ್ನಡ 285, ಉಡುಪಿ ಜಿಲ್ಲೆ 134, ಕಾಸರಗೋಡು 57

Sunday, July 19th, 2020
coronavirus

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿರವಿವಾರ 285 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.  ಈಗ  ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,596ಕ್ಕೆ ಏರಿಕೆಯಾಗಿದೆ. ಕೋವಿಡ್‌ಗೆ ರವಿವಾರ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ತೀವ್ರ ಉಸಿರಾಟ ಸಮಸ್ಯೆ (ಸಾರಿ) ಮತ್ತು ಶೀತ (ಐಎಲ್‌ಐ) ಪ್ರಕರಣಗಳು ಹೆಚ್ಚಿದ್ದು, ಸೋಂಕು ಮೂಲ ಪತ್ತೆಯಾಗದ ಪ್ರಕರಣಗಳು ಕೂಡ 60ಕ್ಕೂ ಹೆಚ್ಚಿವೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದಲೂ ಅನೇಕರಿಗೆ ಸೋಂಕು ಹರಡಿದ್ದು, ಇಂಥವರ ಸಂಪರ್ಕದಲ್ಲಿರುವವರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಆಸ್ಪತ್ರೆ, ಆರೈಕೆ […]

ಎರಡು ತಿಂಗಳ ಮಗುವನ್ನು ಬಲಿ ಪಡೆದ ಕೊರೋನಾ, ನಂದಿಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ‌ ಅಂತ್ಯಸಂಸ್ಕಾರ

Saturday, July 18th, 2020
kodimbala

ಮಂಗಳೂರು : ಆ ಪುಟ್ಟ ಮಗುವನ್ನೂ ಬಿಡಲಿಲ್ಲ ಕೊರೋನಾ, ಮಗು ಹುಟ್ಟಿ ಕೇವಲ ಎರಡೇ ತಿಂಗಳು, ಇನ್ನಷ್ಟೇ  ಪ್ರಪಂಚ ನೋಡಬೇಕಿತ್ತು. ಆದರೆ ಆ ಮಗುವಿಗೆ ದೈತ್ಯ  ಕೊರೋನಾ ದ ಜೊತೆ ಹೋರಾಡಲು ಸಾಧ್ಯವಾಗಲೇ ಇಲ್ಲ. ಕೊರೋನಾ ತನ್ನ ಮನೆಯವರನ್ನು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು  ಬಿಡಲಿಲ್ಲ ಕೊನೆಗೆ ಮಗುವಿನ ಅಂತ್ಯಸಂಸ್ಕಾರ ವನ್ನು ಬಜರಂಗದಳದ ಕಾರ್ಯಕರ್ತರು ನಡೆಸಬೇಕಾಯಿತು. ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಗಾಣದಕೊಟ್ಯದ ದಂಪತಿಯ ಎರಡು ತಿಂಗಳ ಈ ಮಗು ವಾಂತಿ, ಕಫದಿಂದ ಬಳಲುತ್ತಿತ್ತು. ಆದ್ದರಿಂದ ಚಿಕಿತ್ಸೆಗೆ ಮಂಗಳೂರಿನ ಖಾಸಗಿ […]

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೇ ದಿನ 2062 ಕ್ಕೆ ಏರಿಕೆ

Thursday, July 9th, 2020
karnataka corona

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು ಬುಧವಾರ 2062 ಮಂದಿಗೆ ಕೊರೋನಾ ತಗುಲಿದೆ ಇದರೊಂದಿಗೆ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 28,877 ತಲುಪಿದೆ. ಅಲ್ಲದೆ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಸೋಂಕಿನಿಂದಾಗಿ 54 ಮಂದಿ ಸಾವನ್ನಪ್ಪಿದ್ದಾರೆ. ಇದು ಕೊರೋನಾ ಪ್ರಾರಂಭವಾದಂದಿನಿಂದ ರಾಜ್ಯದಲ್ಲಿ ಒಂದೇ ದಿನ ಸಂಭವಿಸಿದ ಸಾವಿನ ಪ್ರಮಾಣದ ಅತಿ ದೊಡ್ಡ ಸಂಖ್ಯೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1148 ಪ್ರಕರಣಗಳು ವರದಿಯಾಗಿದ್ದರೆ ಒಟ್ಟು ಸಂಖ್ಯೆ 12,509ಕ್ಕೆ ಏರಿಕೆಯಾಗಿದೆ. ಅಲ್ಲದೆ ದಕ್ಷಿಣ ಕನ್ನಡ 183, […]