ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ, ಸೆರೆ

Thursday, May 30th, 2013
CP Abdul Latif

ಕಾಸರಗೋಡು : ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾದ ಆರೋಪಿಯನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿ ಕರೆದುಕೊಂಡು ಹೋಗುವಾಗ, ಪೊಲೀಸರ ಕಣ್ತಪ್ಪಿಸಿ ಪರಾರಿಯಾದಾತನನ್ನು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಚಟ್ಟಂಚಾಲ್ ತೆಕ್ಕಿಲ್ ನ ಸಿ.ಎ.ಅಬ್ದುಲ್ ಲತೀಫ್ (43) ಪರಾರಿಯಾದ ಆರೋಪಿಯಾಗಿದ್ದಾನೆ. ಕಳವು ಪ್ರಕರಣದ ಹಿನ್ನಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಲತೀಫ್ ನನ್ನು ಪೊಲೀಸರು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ವಾಪಾಸ್ ಕಣ್ಣೂರಿಗೆ ಕರೆದುಕೊಂಡು ಹೋಗುವಾಗ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದನು. ಈ ವೇಳೆ ಪರಾರಿಯಾದ […]

ಅಕ್ರಮ ಗಾಂಜಾ ಮಾರಾಟ ಗಾಂಜಾ ಸಹಿತ ಆರೋಪಿ ಸೆರೆ

Wednesday, January 23rd, 2013
Ganja

ಉಡುಪಿ : ಉಡುಪಿ-ಮಣಿಪಾಲ ಪರಿಸರದ ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಗಾಂಜಾವನ್ನು ಮಾರಲು ಯತ್ನಿಸುತ್ತಿದ್ದ ಯುವಕನನ್ನು ಡಿಸಿಐಬಿ ಇನ್ಸ್‌ಪೆಕ್ಟರ್ ಪ್ರವೀಣ್ ನಾಯಕ್ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ. ಮಂಗಳೂರು ತಾಲೂಕು ಕೋಡಿ ಉಳ್ಳಾಲ ನಿವಾಸಿ ಮೊಹ ಮ್ಮದ್ ಇಕ್ಬಾಲ್ ಬಂಧಿತ. ಈತನಿಂದ ನಗದು 420 ರೂಪಾಯಿ ಮತ್ತು 580 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ವಶಪಡಿಸಿಕೊಂಡ ಗಾಂಜಾ ಮೌಲ್ಯ 16 ಸಾವಿರ ಎಂದು ಅಂದಾಜಿಸಲಾಗಿದೆ. ಮಂಗಳವಾರ ಖಚಿತ ಮಾಹಿತಿ ಪಡೆದ ಡಿಸಿಐಬಿ ಇನ್ಸ್‌ಪೆಕ್ಟರ್‌ ಪ್ರವೀಣ್‌ ಎಚ್‌. ನಾಯಕ್‌ ನೇತೃತ್ವದ ತಂಡ […]