ತಾಯಿ ಹಾಗೂ ತಂಗಿಯನ್ನ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ವೈದ್ಯನ ಬಂಧನ

Wednesday, December 5th, 2018
murder

ಬೆಂಗಳೂರು: ತಾಯಿ ಹಾಗೂ ತಂಗಿಯನ್ನ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ವೈದ್ಯ ಗೋವಿಂದ್ ಪ್ರಕಾಶ್ನನ್ನು ಆರ್.ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ತಾಯಿ ಹಾಗೂ ತಂಗಿಗೆ ಇಂಜೆಕ್ಷನ್ ನೀಡಿ ಸಾಯಿಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ವೈದ್ಯನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೋವಿಂದ್ ಗುಣಮುಖ ಎಂದು ವೈದ್ಯರು ರಿಪೋರ್ಟ್ ನೀಡಿದ ಬೆನ್ನಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಪೊಲೀಸರ ಬಳಿ ತಾನು ಮಾಡಿದ ಕೃತ್ಯಕ್ಕೆ ಪಶ್ಚಾತಾಪ ಪಟ್ಟಿದ್ದಾನೆ. 48 ವರ್ಷ ಆದರೂ ಮದುವೆಯಾಗಿಲ್ಲ ಎಂದು ಸ್ನೇಹಿತರು ರೇಗಿಸುತ್ತಾ […]

ಬಿಜೆಪಿ ಇಂದಿಗೂ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದೆ: ಪರಮೇಶ್ವರ್‌

Friday, May 25th, 2018
congress

ಬೆಂಗಳೂರು: ಬಿಜೆಪಿ ಶಾಸಕರು ಇಂದಿಗೂ ಕೂಡ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಆದರೆ ನಮ್ಮ ಶಾಸಕರು ಯಾವುದೇ ಆಮಿಷಕ್ಕೆ ಒಳಗಾಗಲ್ಲ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ವಿಶ್ವಾಸಮತ ಯಾಚನೆ ಇದ್ದು, ವಿಶ್ವಾಸಮತ ಸಾಬೀತು ಪಡಿಸುವ ವಿಶ್ವಾಸವಿದೆ. ವಿಶ್ವಾಸಮತ ಯಾಚನೆ ಜೊತೆ ಸ್ಪೀಕರ್ ಚುನಾವಣೆ ಕೂಡ ಇದೆ. ಶಾಸಕ ರಮೇಶ್ ಕುಮಾರ್ ಸ್ಪೀಕರ್ ಚುನಾವಣೆಯಲ್ಲಿ ಗೆದ್ದು ಸ್ಪೀಕರ್ ಆಗಲಿದ್ದಾರೆ. ನಮ್ಮಲ್ಲಿ ಹೆಚ್ಚು ಸ್ಥಾನಗಳು ಇರುವುದರಿಂದ ರಮೇಶ್ ಕುಮಾರ್ ಸ್ಪೀಕರ್ […]

ಎಕ್ಕಡ ಚಿಹ್ನೆಯೊಂದಿಗೆ ಕಣಕ್ಕಿಳಿದಿರುವ ಹುಚ್ಚ ವೆಂಕಟ್

Saturday, April 28th, 2018
huccha-venkat

ಬೆಂಗಳೂರು: ಹುಚ್ಚಾ ವೆಂಕಟ್ ಗೆ ಕೊನೆಗೂ ಚುನಾವಣಾ ಆಯೋಗ ಎಕ್ಕಡವನ್ನು ದಯಪಾಲಿಸಿದೆ. ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಟ, ನಿರ್ದೇಶಕ ಹುಚ್ಚ ವೆಂಕಟ್ ಸ್ಪರ್ಧಿಸುತ್ತಿದ್ದು,ಈಗಾಗಲೇ ಚುನಾವಣೆ ಪ್ರಚಾರವನ್ನು ಶುರು ಮಾಡಿದ್ದಾರೆ. ಹುಚ್ಚ ವೆಂಕಟ್ ಆರ್ ಆರ್ ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಚುನಾವಣೆ ಆಯೋಗವು ಅಭ್ಯರ್ಥಿಗಳ ಗುರುತನ್ನ, ಚಿಹ್ನೆಯನ್ನು ಘೋಷಣೆ ಮಾಡಿದೆ. ಎಕ್ಕಡದೊಂದಿಗೆ ಕಣಕ್ಕಿಳಿದಿರುವ ವೆಂಕಟ್ ಆರ್ ಆರ್ ನಗರದಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.

ಆರ್.ಆರ್. ನಗರ ಟಿಕೆಟ್ ಕೈ ತಪ್ಪಿದ್ದಕ್ಕೆ ರಾಮಚಂದ್ರ ಗರಂ: ಸೊಸೆ ಅಮೂಲ್ಯಗೂ ಬೇಸರ

Tuesday, April 10th, 2018
amulya

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿರುವುದಕ್ಕೆ ಟಿಕೆಟ್ ಆಕಾಂಕ್ಷಿ ಹಾಗೂ ಚಿತ್ರನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅಸಮಾಧಾನ ಹೊರಹಾಕಿದ್ದಾರೆ. ಟಿಕೆಟ್ ಕೈತಪ್ಪಲು ಸಂತೋಷ್ ಜಿ ಪ್ರಮುಖ ಕಾರಣವಾಗಿದ್ದು, ಎರಡು ದಿನಗಳಲ್ಲಿ ಟಿಕೆಟ್ ನೀಡದಿದ್ದರೆ ಪಕ್ಷ ತೊರೆದು ಪಕ್ಷೇತರವಾಗಿ ಕಣಕ್ಕಿಳಿಯುವ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆರ್.ಆರ್. ನಗರ ಕ್ಷೇತ್ರಕ್ಕೆ ತುಳಸಿ ಮುನಿರಾಜು ಗೌಡ ಹೆಸರು ಅಂತಿಮಗೊಂಡ ಹಿನ್ನೆಲೆಯಲ್ಲಿ ರಾಮಚಂದ್ರ ಅವರು ಕಾರ್ಯಕರ್ತರ […]