ಆರ್.ಎಸ್.ಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ಬಂಧನ

Friday, January 17th, 2020
bengaluru

ಬೆಂಗಳೂರು : ಬೆಂಗಳೂರು ನಗರದ ಪುರಭವನದ ಬಳಿ ಕಳೆದ ಡಿ‌. 22ರಂದು ನಡೆದ‌ ಸಿಎಎ ಪರ ಸಮಾವೇಶ ಸಂದರ್ಭದಲ್ಲಿ ಆರ್.ಎಸ್.ಎಸ್ ಕಾರ್ಯಕರ್ತ ವರುಣ್ ಮೇಲೆ ಮಾರಣಾಂತಿ‌ಕ ಹಲ್ಲೆ ಪ್ರಕರಣವನ್ನು ಕಲಾಸಿಪಾಳ್ಯಂ ಪೊಲೀಸರ ತಂಡ ಯಶಸ್ವಿಯಾಗಿ ಭೇದಿಸಿದ್ದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಆರ್‌ಟಿನಗರ ನಿವಾಸಿಗಳಾದ ಇರ್ಫಾನ್ ಅಲಿಯಾಸ್ ಮುಹಮ್ಮದ್ ಇರ್ಫಾನ್ , ಸೈಯದ್ ಅಕ್ಬರ್ ಅಲಿಯಾಸ್ ಮೆಕ್ಯಾನಿಕ್ ಅಕ್ಬರ್, ಸನಾ, ಲಿಂಗರಾಜಪುರಂನ ಸೈಯದ್ ಸಿದಿಕಿ, ಕೆ.ಜಿ.ಹಳ್ಳಿಯ ಅಕ್ಬರ್ ಅನ್ವರ್ ಬಾಷಾ, ಶಿವಾಜಿನಗರ ಸಾದಿಕ್ ಅಮೀನ್ ಅಲಿಯಾಸ್ ಸೌಂಡ್ […]