ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್, ಜಲಾವೃತ್ತ ಪ್ರದೇಶಗಳಲ್ಲಿ ಕೊಂಚ ನೀರು ಇಳಿಕೆ
Tuesday, September 22nd, 2020ಮಂಗಳೂರು : ಜಿಲ್ಲೆಯಲ್ಲಿ ನೈರುತ್ಯ ಮಾರುತ ಮಳೆ ನಿರಂತರವಾಗಿ ಸುರಿಯುತ್ತಿದೆ. ಆದರೆ, ಮಂಗಳವಾರ ಮಳೆಯ ತೀವ್ರತೆ ಮಾತ್ರ ಕಡಿಮೆಯಾಗಿದ್ದು ಜಲಾವೃತ್ತ ಪ್ರದೇಶಗಳಲ್ಲಿ ನೀರು ಇಳಿಕೆಯಾಗಿದೆ. ಬೆಳ್ತಂಗಡಿ ಸೇರಿದಂತೆ ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಪುತ್ತೂರು ಹಾಗೂ ವಿಟ್ಲದಲ್ಲಿ ಮಳೆ ಮುಂದುವರೆದಿದೆ. ನಗರದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಈ ನಡುವೆ ಭಾರಿ ಮಳೆಯಾಗುತ್ತಿದೆ. ಮುಂಜಾನೆ ವೇಳೆ ಸ್ವಲ್ಪ ಹಾಗೂ ಸಾಧಾರಣ ಮಳೆಯಾಗಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಫಾಲ್ಗುಣಿ, ನಂದಿನಿ […]