ಆಟಿ ಅಮಾವಾಸ್ಯೆ ದೇವಸ್ಥಾನಗಳಲ್ಲಿ ತೀರ್ಥಸ್ನಾನ ಇಲ್ಲ, ಕೊರೊನಾ ಸೋಂಕಿನ ಹಿನ್ನೆಲೆ ಪಾಲೆ ಕಷಾಯಕ್ಕೆ ಬೇಡಿಕೆ

Monday, July 20th, 2020
palekashaya

ಬಂಟ್ವಾಳ: ಆಟಿ ಅಮಾವಾಸ್ಯೆಯ ದಿನ ಪಾಲೆ (ಹಾಲೆ) ಮರದಲ್ಲಿ ವಿಶೇಷ ರೋಗ ನಿರೋಧಕ ಶಕ್ತಿ ಇದೆ ಎಂಬ ನಂಬಿಕೆ ತಲತಲಾಂತರ ದಿಂದ ಬಂದಿದೆ. ಸೂರ್ಯೋದಯದ ಮೊದಲು ಅಂದರೆ ನಸುಕಿನಲ್ಲೇ ಕಲ್ಲಿನಿಂದ ಜಜ್ಜಿ ತಂದು ಕಷಾಯ ಮಾಡಿ ಸೇವಿಸುವುದು ರೂಢಿ. ಆಷಾಢ ತಿಂಗಳಲ್ಲಿ ಭಾರಿ ಮಳೆ. ಕ್ರಿಮಿ- ಕೀಟಬಾಧೆಯಿಂದ ಆರೋಗ್ಯದ ರಕ್ಷಣೆ, ರೋಗ ನಿರೋಧಕತೆಗಾಗಿ ಪಾಲೆ (ಹಾಲೆ) ಮರದ ತೊಗಟೆಯ ಕಷಾಯ ಮಾಡಿ ಕುಡಿದರೆ ಒಳ್ಳೆಯದಂತೆ. ಔಷಧೀಯವಾಗಿ ಈ ಕಷಾಯಕ್ಕೆ ಬಹಳಷ್ಟು ಮಹತ್ವವಿರುವುದರಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಬೇಡಿಕೆ ವ್ಯಕ್ತವಾಯಿತು. ಈ ಬಾರಿ ಲಾಕ್ ಡೌನ್ […]

ಬರಿಗಾಲಲ್ಲಿ ಬೆಟ್ಟ ಹತ್ತಿ ಕೊರೊನಾ ತೊಲಗಿಸಲು ಚಾಮುಂಡಿಯ ಪ್ರಾರ್ಥಿಸಿದ ಶೋಭಾ ಕರಂದ್ಲಾಜೆ

Friday, July 17th, 2020
shobha karandlaje

ಮೈಸೂರು: ಮಹಾಮಾರಿ ಕೊರೊನಾ ತೊಲಗಿಸಲು ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ. ಇಡೀ ವಿಶ್ವ ವ್ಯಾಪಿ ಕೊರೊನಾ ತಾಂಡವವಾಡುತ್ತಿದ್ದು, ಅತೀ ಶೀಘ್ರವೇ ಮಹಾಮಾರಿ ತೊಲಗಲಿ, ನಾಡಿನ ಜನತೆಗೆ ಆರೋಗ್ಯ, ಸುಖ ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಆಷಾಢ ಮಾಸದಲ್ಲಿ ಪ್ರತಿ ವರ್ಷ ಅವರು ಬೆಟ್ಟವನ್ನು ಬರಿಗಾಲಿನಲ್ಲಿ ಹತ್ತುವ ವಾಡಿಕೆ ಇದ್ದು, ಈ ವರ್ಷವು ಅದನ್ನು ಪೂರ್ಣಗೊಳಿಸಿದ್ದಾರೆ‌. […]