ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ಆರಂಭಿಸಿದ ವೈದ್ಯರು

Thursday, July 22nd, 2021
Oscar Fernandes

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿದ್ದು, ಬುಧವಾರ ರಾತ್ರಿಯಿಂದಲೇ ಆರಂಭಿಸಲಾಗಿದೆ. ಸೋಮವಾರ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದರು. ಈ ವೇಳೆ, ಯಾವುದೇ ಗಾಯಗಳಾಗದೇ ಇರುವುದರಿಂದ ಅದನ್ನು ನಿರ್ಲಕ್ಷ್ಯ ಮಾಡಿದ್ದರು. ಅದೇ ದಿನ ಅವರು ಡಯಾಲಿಸಿಸ್ ಚಿಕಿತ್ಸೆಗೆಂದು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಪರೀಕ್ಷಿಸಿದಾಗ ಅವರ ತಲೆಯ ಒಳಭಾಗದಲ್ಲಿ ನರಕ್ಕೆ ಗಾಯವಾಗಿ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು ಕಂಡುಬಂದಿತ್ತು. ಮರುದಿನ ಅವರು […]

ಧಾರ್ಮಿಕ ಸೌಹಾರ್ದತೆಯೇ ದೇಶದ ಸಂಪನ್ನತೆ : ಆಸ್ಕರ್ ಫೆರ್ನಾಂಡೀಸ್

Monday, March 7th, 2016
machampady Uroos

ಮಂಜೇಶ್ವರ: ಎಲ್ಲಾ ಧರ್ಮಗಳೂ ಜಗತ್ತಿಗೆ ಶಾಂತಿ ಸಹಬಾಳ್ವೆಯನ್ನು ಬೋಧಿಸಿವೆ. ಶಾಂತಿ ಸೌಹಾರ್ದತೆಯನ್ನು ಮೈಗೂಡಿಸಿಕೊಂಡರೆ ಬದುಕು ಪರಿಪೂರ್ಣವಾಗುತ್ತವೆ ಎಂದು ಮಾಜೀ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಹೇಳಿದ್ದಾರೆ. ಅವರು ಇಲ್ಲಿನ ಮಚ್ಚಂಪಾಡಿ ಬಪ್ಪಂಕುಟ್ಟಿ ವಲಿಯುಲ್ಲಾಹೀ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ವಿಭಿನ್ನ ಸಂಸ್ಕ್ರತಿಯ ದೇಶವಾಗಿದ್ದು. ಇಲ್ಲಿ ಧಾರ್ಮಿಕ ಸೌಹಾರ್ದತೆ ಸಂಪನ್ನವಾಗಿದೆ,ಭಾರತದಷ್ಟು ವೈವಿಧ್ಯತೆಯಿರುವ ರಾಷ್ಟ್ರ ಜಗತ್ತಿನಲ್ಲಿ ಬೇರೊಂದಿಲ್ಲ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉರೂಸ್ ಸಮಿತಿಯ ಅಧ್ಯಕ್ಷ ಪಿ.ಎಚ್.ಅಬ್ದುಲ್ ಹಮೀದ್ ಅಧ್ಯಕ್ಷತೆ ವಹಿಸಿದ್ದರು. […]