ಜನರ ಮರಳು ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮಧ್ಯೆ ಪ್ರವೇಶಿಸಬೇಕೆಂದು ಕೋರಿ ಮನವಿ

Wednesday, October 24th, 2018
mangaluru

ಮಂಗಳೂರು: ಕಳೆದ ಹಲವು ತಿಂಗಳುಗಳಿಂದ ಕರಾವಳಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದೆ. ದ.ಕ.ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ನದಿಗಳಲ್ಲಿ ದೊರೆಯುತ್ತಿದ್ದರೂ ರಾಜ್ಯ ಸರ್ಕಾರ ಮರಳು ನೀತಿ ತರಲಿದೆಯೆಂದು ಮರಳುಗಾರಿಕೆಗೆ ಅವಕಾಶ ನೀಡಲು ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿದೆ. ಮರಳು ಸಮಸ್ಯೆಯಿಂದಾಗಿ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರವು ಸಂಪೂರ್ಣವಾಗಿ ನೆಲಕಚ್ಚಿದೆ.ದುಡಿಮೆಯನ್ನೇ ನಂಬಿ ಸಾಲ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಸಾವಿರಾರು ಕುಟುಂಬಗಳು ಕೆಲಸ ಇಲ್ಲದೆ ಸಂಕಷ್ಟದಲ್ಲಿದೆ. ಮರಳು ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಜಿಲ್ಲಾಡಳಿತವೇ ಕಟ್ಟಡ ಕಾರ್ಮಿಕರಿಗೆ ಕೆಲಸ ನಿರಾಕರಣೆ ಮಾಡಿದಂತಾಗಿದೆ. […]