ವೃದ್ಧನನ್ನು ಅಪಹರಿಸಿ ಕೊಲೆ, ನಾಲ್ವರು ಆರೋಪಿಗಳ ಬಂಧನ

Tuesday, November 3rd, 2020
Palliyabba

ಮಂಗಳೂರು : ಇರಾ ಗ್ರಾಮದ ಮೂಳೂರು  ಡಬಲ್ ರೋಡ್ ನಿರ್ಜನ ಪ್ರದೇಶದ ಗುಡ್ಡ ಜಾಗದಲ್ಲಿ 71 ವರ್ಷದ ವೃದ್ಧನನ್ನು ಅಪಹರಿಸಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕೋಣಾಜೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಮಲಾರ್ನ ಪಳ್ಳಿಯಬ್ಬ (71) ಎಂಬ ವೃದ್ಧರೊಬ್ಬರನ್ನು ಅ. 29ರಂದು ಅಪಹರಿಸಿ ಇರಾ ಗ್ರಾಮದ ಮೂಳೂರು ಡಬಲ್ ರೋಡ್ ನಿರ್ಜನ ಪ್ರದೇಶದ ಗುಡ್ಡ ಜಾಗದಲ್ಲಿ ಕೊಲೆ ಮಾಡಿ ಮೃತದೇಹವನ್ನು ಹೊಂಡ ತೆಗೆದು ಮುಚ್ಚಲಾಗಿತ್ತು. ಈ ಕೊಲೆ ಪ್ರಕರಣ ನಿನ್ನೆ ಬೆಳಕಿಗೆ ಬಂದಿದ್ದು, ಈ […]

ಇರಾ ಗ್ರಾಮದಲ್ಲಿ, ಗ್ರಾಮದ ಸಮಗ್ರ ಮಾಹಿತಿ ನೀಡುವ ರಾಜ್ಯದ ಮೊತ್ತ ಮೊದಲ ಜಾಲತಾಣ

Friday, July 29th, 2016
Ira-village

ಉಳ್ಳಾಲ: ಮಾದರಿ ಸ್ವತ್ಛ ಗ್ರಾಮ ಪುರಸ್ಕಾರ ಪಡೆದು ದೇಶದ ಗಮನ ಸೆಳೆದಿದ್ದ ಪುಟ್ಟ ಗ್ರಾಮ ಇರಾ ಇದೀಗ ರಾಜ್ಯದಲ್ಲೇ ಮತ್ತೂಂದು ವಿನೂತನ ಪ್ರಯೋಗಕ್ಕೆ ಸಾಕ್ಷಿಯಾಗಿದೆ. ಗ್ರಾಮದ ಸಮಗ್ರ ಮಾಹಿತಿ ನೀಡುವ ರಾಜ್ಯದ ಮೊತ್ತ ಮೊದಲ ಜಾಲತಾಣ ನಿರ್ಮಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಮತ್ತೆ ಸುದ್ದಿಯಲ್ಲಿದೆ. ಇರಾ ಗ್ರಾಮಕ್ಕೆ ಪ್ರತ್ಯೇಕವಾದ ಜಾಲತಾಣವೊಂದನ್ನು ರಚಿಸಲಾಗಿದ್ದು, ಮಂಗಳವಾರ ನಡೆದ ಗ್ರಾಮ ಸಭೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್‌ ಅಧ್ಯಕ್ಷ ಚಂದ್ರಹಾಸ ಕರ್ಕೇರ ಲೋಕಾರ್ಪಣೆ ಮಾಡಿದರು. ಇರಾ […]

ಶಾಲಾ ಪರಿಸರದಲ್ಲಿ ಮದ್ಯ ಮಾರಾಟ-ಓರ್ವನ ಸೆರೆ

Tuesday, February 9th, 2016
liquor chandrahasa 48

ಉಪ್ಪಳ: ಶಾಲಾ ಪರಿಸರದಲ್ಲಿ ವ್ಯಾಪಕ ಮದ್ಯ ಮಾರಾಟ ನಡೆಯುತ್ತಿರುವುದಾಗಿ ಲಭಿಸಿದ ದೂರಿನ ಮೇರೆಗೆ ಅಬಕಾರಿ ಪೋಲೀಸರು ಮಂಗಳವಾರ ನಡೆಸಿದ ಕಾರ್ಯಾಚರಣೆಯಲ್ಲಿ ಮಾರಾಟದ ಮೂಲ ಸೂತ್ರದಾರನಾದ ಓರ್ವನನ್ನು ಬಂಧಿಸುವಲಲ್ಲಿ ಯಶಸ್ವಿಯಾಗಿದ್ದಾರೆ. ಉಪ್ಪಳ ಪಚ್ಲಂಪಾರೆಯ ಚಂದ್ರಹಾಸ(48)ಬಂಧಿತ ಆರೋಪಿ.ಈತನಿಂದ 180 ಮಿಲ್ಲಿಯ 48 ಮದ್ಯ ಬಾಟಲಿಗಳನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಉಪ್ಪಳ ಶಾಲಾ ಪರಿಸರದಲ್ಲಿ ಪ್ಲಾಸ್ಟಿಕ್ ಬಕೇಟ್ ನಲ್ಲಿ ತುಂಬಿಸಿ ಮದ್ಯ ಮಾರಾಟ ಮಾಡುತ್ತಿರುವ ಮಧ್ಯೆ ಆರೋಪಿಯನ್ನು ಚಾಣಾಕ್ಷತನದಿಂದ ಸೆರೆಹಿಡಿಯಲಾಗಿದೆ.ಶಾಲಾ ಪರಿಸರದಲ್ಲಿ ವ್ಯಾಪಕ ಮದ್ಯ ಮಾರಾಟ ನಡೆಸಲಾಗುತ್ತಿದೆಯೆಂಬ ಊರವರ ನಿರಂತರ ದೂರಿನ ಪರಿಣಾಮ […]