ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಹೋಗಿ ಪ್ರಾಣಕಳಕೊಂಡ ಯುವಕ

Saturday, January 29th, 2022
loyd

ಉಳ್ಳಾಲ : ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಆಕೆಯ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಶುಕ್ರವಾರ ಸಂಜೆ ವರದಿಯಾಗಿದೆ. ಈ ನಡುವೆ ಯುವತಿಯನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ್ದಾರೆ. ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋಟೆಕಾರು ಪಾನೀರು ನಿವಾಸಿ ಅಶ್ವಿತ ಫೆರಾವೊ(22)ಆತ್ಮ ಹತ್ಯೆಗೆ ಯತ್ನಿಸಿ ಪಾರಾದ ಯುವತಿ. ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಲಾಯ್ಡ್ ಡಿಸೋಜ ಮತ್ತು ಅಶ್ವಿತಾ […]

ಸುರತ್ಕಲ್ ಬೀಚ್ ನಲ್ಲಿ ಸಮುದ್ರ ಪಾಲಾದ ಶಿವಮೊಗ್ಗ ಮೂಲದ ಬಾಲಕ

Tuesday, March 2nd, 2021
surathkal Beach

ಮಂಗಳೂರು :  ಶಿವಮೊಗ್ಗ ಮೂಲದ ಬಾಲಕನೋರ್ವ ಸುರತ್ಕಲ್  ಗುಡ್ಡೆಕೊಪ್ಲ ಬೀಚ್ನಲ್ಲಿ ಸಮುದ್ರ ಪಾಲಾದ ಘಟನೆ ಸೋಮವಾರ ನಡೆದಿದೆ. ಬಾಲಕನ ತಂದೆಯನ್ನು ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮುಬಾರಕ್ (15) ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ. ಈ ವೇಳೆ ಸಮುದ್ರ ವಿಹಾರಕ್ಕೆಂದು ಹೆತ್ತವರು ಹಾಗೂ ಸಂಬಂಧಿಕರೊಂದಿಗೆ ತೆರಳಿದ್ದ. ಸಮುದ್ರ ತೀರದಲ್ಲಿ ನೀರಿಗಿಳಿದು ಆಟವಾಡುತ್ತಿದ್ದಾಗ ಬೃಹತ್ ಗಾತ್ರದ ತೆರೆ ಅಪ್ಪಳಿಸಿ ಬಾಲಕ ಮುಬಾರಕ್ ನೀರು ಪಾಲಾಗಿದ್ದಾನೆ. ಈ ಸಂದರ್ಭ ಬಾಲಕನ ತಂದೆಯೂ ಅಲೆಯ ಸೆಳೆತಕ್ಕೆ ಸಿಲುಕಿದ್ದು, ತಕ್ಷಣ ಸ್ಥಳೀಯ […]