ಕರ್ತವ್ಯದಲ್ಲಿದ್ದ ಉರ್ವ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಗೆ ಹೃದಯಾಘಾತ

Saturday, October 2nd, 2021
Sidharth

ಮಂಗಳೂರು : ರಾತ್ರಿ  ಕರ್ತವ್ಯದಲ್ಲಿದ್ದ ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಸಿದ್ಧಾರ್ಥ್ ಜೆ. (41) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು. ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾರ್ಟ್ರಸ್‌ನಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರಲ್ಲಿ ಅನಾರೋಗ್ಯ ಕಂಡುಬಂದಿತ್ತು. ಸಹೋದ್ಯೋಗಿಗಳು ಮನೆಗೆ ಹೋಗಲು ಹೇಳಿದ್ದರು. ನಂತರ ಮನೆಗೆ ತೆರಳಿದ್ದ ಸಿದ್ಧಾರ್ಥ್ ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಗರದ ಫಾದರ್ ಮುಲ್ಲರ್ […]

ಮೆಡಿಕಲ್‌ ಶಾಪಿಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ: ವ್ಯಕ್ತಿಯ ಬಂಧನ

Wednesday, June 2nd, 2021
Rape Attempt

ಈಶ್ವರಮಂಗಲ: ಯಾರು ಇಲ್ಲದೆ ಇರುವುದನ್ನು ಗಮನಿಸಿದ ವ್ಯಕ್ತಿಯೊಬ್ಬ ಔಷಧ ಖರೀದಿಗೆಂದು ಈಶ್ವರಮಂಗಲದ ಮೆಡಿಕಲ್‌ಗೆ ಬಂದು ಅಲ್ಲಿದ್ದ ಮಹಿಳಾ ಸಿಬ್ಬಂದಿಯನ್ನು ಮಾನಭಂಗಕ್ಕೆ ಯತ್ನಿಸಿದ ಘಟನೆ ಸುಳ್ಯ ಸಮೀಪದ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಕುಕ್ಕಾಜೆ ನಿವಾಸಿ ಇಬ್ರಾಹಿಂ ಕುಕ್ಕಾಜೆ (60) ಎಂಬಾತ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮೆಡಿಕಲ್‌ನಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ಇಬ್ರಾಹಿಂ ಒಳನುಗ್ಗಿ ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಕಿರುಚಿದ್ದರು. ತಕ್ಷಣ ಸುತ್ತಮುತ್ತಲಿದ್ದ ಮಂದಿ ಜಮಾಯಿಸಿ ಆತನನ್ನು ಹಿಡಿದು ಈಶ್ವರಮಂಗಲ ಹೊರ ಠಾಣೆ ಪೊಲೀಸರಿಗೆ […]

ಈಶ್ವರಮಂಗಲದ ಮದುವೆಯ ಬಸ್ಸು ದುರಂತ ; ಮೃತರ ಸಂಖ್ಯೆ ಎಂಟಕ್ಕೇರಿಕೆ

Sunday, January 3rd, 2021
suraksha bus

ಕಾಸರಗೋಡು : ಸುಳ್ಯದ ಈಶ್ವರಮಂಗಲದಿಂದ  ಕಾಸರಗೋಡಿನ ಪಾಣತ್ತೂರು ಕರಿಕೆಗೆ ಮದುವೆಯ ದಿಬ್ಬಣ ಹೊರಟಿದ್ದ ಸುಮಾರು ಅರವತ್ತು ಜನರಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಮಕ್ಕಳು ಸೇರಿದಂತೆ 8 ಜನ ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮತ್ತು ಪುತ್ತೂರಿನ ನಿವಾಸಿಗಳಾದ ರಾಜೇಶ್, ರವಿ ಚಂದ್ರನ್, ಸುಮತಿ, ಜಯಲಕ್ಷ್ಮಿ, ಶ್ರೇಯಸ್ ಮತ್ತು ಆದರ್ಶ್  ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಕಾಞಂಗಾಡ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾದ 29 […]

ತನ್ನ ಗೂಡಂಗಡಿಗೆ ತಾನೇ ಬೆಂಕಿ ಹಚ್ಚಿಕೊಂಡ ಮಾಲೀಕ

Tuesday, September 8th, 2020
petty Shop

ಪುತ್ತೂರು : ತನ್ನ ಗೂಡಂಗಡಿಗೆ ತಾನೇ ಬೆಂಕಿ ಹಚ್ಚಿಕೊಂಡು ನಂದಿಸಲು ಬಂದವರನ್ನು ಬಿಡದೆ  ಅಂಗಡಿಯೊಳಗಿನ ಸಾಮಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ಘಟನೆ ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ. ಸ್ಟೇಶನರಿ ಸಾಮಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಗೆ  ಮಾವಿನಕಟ್ಟೆ ನಿವಾಸಿ ಮಹಮ್ಮದ್ ಬೆಂಕಿ ಹಚ್ಚಿದವರು. ಕಳೆದ ನಾಲ್ಕು ವರ್ಷಗಳಿಂದ ಇದೇ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್, ಅಂಗಡಿ ಬಾಗಿಲು […]

ಪುತ್ತೂರು : ಕಾರು ಚಾಲಕ ಮೃತ್ಯು ; ಬಸ್ ಪುಡಿಗೈದ ಆಕ್ರೋಶಿತರು

Monday, August 12th, 2019
Puttur-Accident

ಪುತ್ತೂರು : ಪುತ್ತೂರಿನ ಕಬಕದ ಸಮೀಪ ಖಾಸಗಿ ಬಸ್ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಆ. 12 ರ ಸೋಮವಾರ  ಪೊಲ್ಯದಲ್ಲಿ ನಡೆದಿದೆ. ಮಂಗಳೂರು – ಪುತ್ತೂರು ನಡುವೆ ಸಂಚರಿಸುವ ಧರಿತ್ರಿ ಬಸ್ ಕಾರಿಗೆ ಢಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಕಾರು ಚಾಲಕ ಹಕೀಮ್ ಸಾವನ್ನಪ್ಪಿದ್ದಾರೆ. ಹಕೀಮ್ ಪುತ್ತೂರಿನ ಈಶ್ವರಮಂಗಲದ ನಿವಾಸಿಯಾಗಿದ್ದಾರೆ. ಘಟನೆ ನಡೆದ ತಕ್ಷಣ ಆಕ್ರೋಶಗೊಂಡ ಸ್ಥಳೀಯರೂ ಬಸ್ ಪುಡಿಗೈದಿದ್ದಾರೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ದ.ಕ ಜಿಲ್ಲಾ ಪೊಲೀಸರಿಂದ 5 ಮಂದಿ ಅಂತಾರಾಜ್ಯ ಕಳ್ಳರ ಬಂಧನ

Wednesday, September 28th, 2016
mangalore-police

ಮಂಗಳೂರು: ಕರ್ನಾಟಕದ ನಾನಾ ದೇವಸ್ಥಾನಗಳು ಸೇರಿದಂತೆ ಮಹಾರಾಷ್ಟ್ರದಲ್ಲಿ ಕಳವು ಪ್ರಕರಣದಲ್ಲಿ ಭಾಗಿಯಾದ 5 ಮಂದಿ ಅಂತಾರಾಜ್ಯ ಕಳ್ಳರನ್ನು ದ.ಕ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಥಾಣಾದಲ್ಲಿ ಬಂಧಿಸಿರುವ ಪೊಲೀಸರು ಆರೋಪಿಗಳಿಂದ 22 ಕೆಜಿ ಬೆಳ್ಳಿ ಹಾಗೂ 75 ಗ್ರಾಂ ಚಿನ್ನ ಸೇರಿದಂತೆ ಒಟ್ಟು 12.5 ಲಕ್ಷ ರು. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹೊನ್ನಾವರದ ಚಂದ್ರಕಾಂತ ಪೂಜಾರಿ (36), ದೊಡ್ಡಬಳ್ಳಾಪುರದ ನರಸಿಂಹ ರಾಜು (38), ಮಹಾರಾಷ್ಟ್ರ-ಥಾಣೆಯ ನವೀನ್ ಚಂದ್ರ ಬಾನ್ ಸಿಂಗ್ (21), ವಿಜಯ ಸುರೇಶ್ ಬೋನ್ಸೆ (35) […]