ಕಾಸರಗೋಡು : ಲಾರಿ-ಬೈಕ್ ಅಪಘಾತ ಬೈಕ್ ಸವಾರ ಸಾವು

Saturday, November 2nd, 2019
Kasaragod

ಕಾಸರಗೋಡು : ಆದೂರು ಕೋಟೂರು ತಿರುವಿನಲ್ಲಿ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಇಂದು ಶನಿವಾರ ಸಂಭವಿಸಿದೆ. ಕೋಟೂರು ನಿವಾಸಿ ಈಶ್ವರ ಭಟ್ ಮೃತರು ಎಂದು ಗುರುತಿಸಲಾಗಿದೆ. ಅವರು ಮೆಡಿಕಲ್ ರೆಪ್ರಸೆಂಟಿವ್ ಆಗಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕದಿಂದ ಕಾಸರಗೋಡು ಕಡೆಗೆ ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಯಕ್ಷಗಾನ ಕಲಾವಿದರ ಸಂಕಷ್ಟಗಳಿಗೆ ಸ್ಪಂದಿಸುವುದು ಶ್ಲಾಘನೀಯ: ಈಶ್ವರ ಭಟ್

Wednesday, December 19th, 2018
mahaganati

ಮೂಡುಬಿದಿರೆ: ಕಲೆಯನ್ನು ಧರ್ಮ ಪ್ರಸಾರ ಸಾಧನವಾಗಿ ಮುನ್ನಡೆಸುತ್ತ ಬರುತ್ತಿರುವವರು ಯಕ್ಷಗಾನ ಕಲಾವಿದರು. ಅವರ ಸಂಕಷ್ಟಗಳಿಗೆ ಸ್ಪಂದಿಸುವ, ಸಾಧಕರನ್ನು ಗೌರವಿಸುವ ಸಹೃದಯತೆಯಿಂದ ಕೆಲಸ ಮಾಡುತ್ತಿರುವ ಪಟ್ಲ ಫೌಂಡೇಶನ್‌ ನಿಜಕ್ಕೂ ಕಲೆಯ ಉಳಿವು ಮತ್ತು ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ, ಆಡಳಿತ ಮೊಕ್ತೇಸರ ವೇ|ಮೂ| ಈಶ್ವರ ಭಟ್‌ ಹೇಳಿದರು. ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ, ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮೂಡುಬಿದಿರೆ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ […]