ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚನೆ, 32 ಸ್ಥಳಗಳಲ್ಲಿ ಚೆಕ್‌ಪೋಸ್ಟ್ : ವಿಕಾಸ್‌ ಕುಮಾರ್

Tuesday, October 27th, 2020
Ujjodi Cow

ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚಿಸಲಾಗಿದ್ದು, ಇಲ್ಲಿಯವರೆಗೆ 28 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ವಿಕಾಸ್‌ ಕುಮಾರ್ ತಿಳಿಸಿದ್ದಾರೆ. ದನ ಕಳವು, ಅಕ್ರಮ ದನ ಸಾಗಾಟ ಮತ್ತು ಅಕ್ರಮ ದನಗಳ ವಧೆ ತಡೆಟ್ಟುವ ಸಲುವಾಗಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ‘ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ’ ಎಂಬ ವಿಶೇಷ ತಂಡ ಅ.5ರಿಂದ ಕಾರ್ಯಾಚರಿಸುತ್ತಿದೆ. ನಗರಕ್ಕೆ […]

ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವು

Monday, January 30th, 2017
Ujjodi

ಮಂಗಳೂರು: ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳೂರಿನ ನಂತೂರು ಬಳಿಯ ಉಜ್ಜೋಡಿಯಲ್ಲಿ ನಡೆದಿದೆ. ವಲೇರಿಯನ್ ಲೋಬೋ(55), ಎಸ್ಮಿ ಲೋಬೋ(51), ಸಂದೀಪ್ (28) ಮೃತಪಟ್ಟವರು. ಕಬ್ಬಿಣದ ಏಣಿಯಿಟ್ಟು ತೆಂಗಿನ ಮರಕ್ಕೇರಿದ್ದಾಗ ಈ ದುರಂತ ಸಂಭವಿಸಿದೆ. ತೆಂಗಿನಮರದಲ್ಲಿದ್ದ ಕಾಳುಮೆಣಸು ಕೀಳಲು ವಲೇರಿಯನ್ ಲೋಬೋ ಮರ ಹತ್ತಿದ್ದರು. ಈ ವೇಳೆ ಸ್ಟೀಲ್ ಏಣಿ ವಿದ್ಯುತ್ ತಂತಿಗೆ ಬಿದ್ದು ಈ ದುರಂತ ಸಂಭವಿಸಿದೆ. ಲೋಬೋ ರಕ್ಷಣೆಗೆ ಧಾವಿಸಿದ ಇಬ್ಬರು ಕೂಡ ದುರಂತದಲ್ಲಿ ಸಾವಿಗೀಡಾಗಿದ್ದಾರೆ.