ಹುಬ್ಬಳ್ಳಿಯ ರೌಡಿ ಷೀಟರ್‌ ಫ್ರೋಟ್ ಇರ್ಫಾನ್‍ ಆಸ್ಪತ್ರೆಯಲ್ಲಿ ಮೃತ

Friday, August 7th, 2020
irfan

ಹುಬ್ಬಳ್ಳಿ:  ಬೀಗರನ್ನು ಬೀಳ್ಕೊಡಲು  ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಗುಂಡಿನ ಸುರಿಮಳೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹುಬ್ಬಳ್ಳಿಯ ರೌಡಿ ಷೀಟರ್‌ ಫ್ರೋಟ್ ಇರ್ಫಾನ್‍ (52) ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಇರ್ಫಾನ್ ಹೊಟ್ಟೆಪಾಡಿಗಾಗಿ ಧಾರವಾಡಕ್ಕೆ ಬಂದು ಅಲ್ಲಿಯೇ ನೆಲೆಯೂರಿ ತನ್ನ ಅಪರಾಧ ಜಗತ್ತನ್ನು ವಿಸ್ತಾರ ಮಾಡಿಕೊಂಡು ಡಾನ್ ಆಗಿದ್ದ. ಮಗನ ಮದುವೆ ಮುಗಿಸಿ ಅತಿಥಿಗಳನ್ನು ಕಳುಹಿಸಲು ರಸ್ತೆ ಬದಿಯಲ್ಲಿ ಬಂದು ನಿಂತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ಗುಂಡಿನ ಮಳೆಗರೆದಿದ್ದರು. ಇರ್ಫಾನ್ ತಮ್ಮ ಮಗನ ಮದುವೆ […]

ಉತ್ತರಕನ್ನಡ : ನೆರೆಹಾನಿ ವೀಕ್ಷಣೆ ರದ್ದುಗೊಳಿಸಿದ ಸಿಎಂ; ಸಂತ್ರಸ್ತರ ಆಕ್ರೋಶ

Saturday, August 31st, 2019
uttara-kannada

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ನೆರೆಹಾನಿ ವೀಕ್ಷಣೆಗೆ ಆಗಮಿಸಬೇಕಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಸ‌ ರದ್ದಾಗಿದ್ದು, ಇದೀಗ ರೈತರ ಹಾಗೂ ನೆರೆ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಎಡಬಿಡದೆ ಮಳೆ ಸುರಿಯುತ್ತಿದ್ದು, ಎಲ್ಲೆಡೆ ಮೋಡ ಕವಿದ ವಾತಾವರಣವಿದೆ. ಈ ಕಾರಣದಿಂದ ಶಿವಮೊಗ್ಗದಿಂದ ಹೆಲಿಕಾಪ್ಟರ್ ಮೂಲಕ ಕಾರವಾರ ಬಂದು ಹಾವೇರಿಗೆ ತೆರಳಬೇಕಿದ್ದ ಸಿಎಂ ಉತ್ತರಕನ್ನಡ ಪ್ರವಾಸ ರದ್ದಾಗಿ ಕೇವಲ ಹಾವೇರಿಗೆ ಮಾತ್ರ ತೆರಳಲಿದ್ದಾರೆ. ಆದರೆ, ಕಳೆದ 15 ದಿನಗಳ ಹಿಂದೆ ಸುರಿದ ಭಾರಿ […]

ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಚಿರನಿದ್ರೆಗೆ

Wednesday, October 4th, 2017
chittani

ಕಾರವಾರ: ಯಕ್ಷಗಾನ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಇತ್ತೀಚಿನವರೆಗೂ ಯಕ್ಷಗಾನದಲ್ಲಿ ಸಕ್ರಿಯವಾಗಿದ್ದ 84 ವರ್ಷದ ರಾಮಚಂದ್ರ ಹೆಗಡೆ ಕೆಲವಾರು ದಿನಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾತ್ತಿತ್ತು. ಆದರೆ ನಿನ್ನೆ ಚಿಕಿತ್ಸೆಗೆ ಸ್ಪಂದಿಸದೆ ಒಂಬತ್ತುಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಇವರ ಸಾವು ಕೋಟ್ಯಾಂತರ ಅಭಿಮಾನಿಗಳನ್ನು ಹಾಗೂ ಕುಟುಂಬುದವರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. 1933ರ ಜನವರಿ 1ರಂದು ಚಿಟ್ಟಾಣಿ ರಾಮಚಂದ್ರ ಹೆಗಡೆಯವರು  ಜಿಲ್ಲೆಯ ಹೊನ್ನಾವರದಲ್ಲಿ ಜನಿಸಿದವರು. ಏಳು ವರ್ಷ ವಯಸ್ಸಿದ್ದಾಗಲೇ ಯಕ್ಷಗಾನಕ್ಕೆ ಧುಮುಕಿದ ಹೆಗಡೆಯವರು, 14ನೇ […]