ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ..!

Tuesday, September 25th, 2018
accident

ಬೆಳ್ತಂಗಡಿ: ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಕೆದ್ದಲಿಕೆಯಲ್ಲಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪುಂಜಾಲಕಟ್ಟೆ ಕುಕ್ಕಳ ಗ್ರಾಮದ ನಿವಾಸಿ ಚಿನ್ನಸ್ವಾಮಿ(70) ಬಂಧಿತ ಆರೋಪಿ. ಬಂಧಿತನಿಂದ 15 ಜಿಲೆಟಿನ್ ಕಡ್ಡಿ, 99 ಡಿಟೋನೇಟರ್ ಮತ್ತು ಇವುಗಳನ್ನು ಸಾಗಿಸಲು ಉಪಯೋಗಿಸಿದ ಹೊಂಡಾ ಆ್ಯಕ್ಟಿವಾ ಸಹಿತ ಒಟ್ಟು 1,05,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿಸಿಐಬಿ ಪೊಲೀಸರು ರೌಂಡ್ಸ್ನಲ್ಲಿದ್ದ ಸಂದರ್ಭ ನೆಲ್ಲಿಗುಡ್ಡೆಯಿಂದ ಪುಂಜಾಲಕಟ್ಟೆ ಕಡೆಗೆ KA-21, S-9835 ಸಂಖ್ಯೆಯಹೋಂಡಾ ಆ್ಯಕ್ಟಿವಾದಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿರುವುದಾಗಿ ಮಾಹಿತಿ ಬಂದಿತ್ತು. ಆಗ […]

850 ಕೆ.ಜಿ. ಗೋಮಾಂಸ ಸಹಿತ ಐವರು ಪೊಲೀಸರ ವಶಕ್ಕೆ

Tuesday, April 17th, 2018
arresting

ಬೆಳ್ತಂಗಡಿ: ಜಿಲ್ಲಾ ಅಪರಾಧ ಪತ್ತೆ ದಳದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಎ.16ರಂದು ಬೆಳಗ್ಗೆ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅಕ್ರಮ ಗೋಮಾಂಸ ಸಾಗಾಟವನ್ನು ಪತ್ತೆ ಹಚ್ಚಲಾಗಿದೆ. ಸುಮಾರು 850 ಕೆ.ಜಿ. ಗೋಮಾಂಸವನ್ನು ಸಾಗಿಸುತ್ತಿದ್ದ ಐವರನ್ನು ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ. ಬಂಧಿತರು ಮತ್ತು ಸುಮಾರು 14.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಂಬಂಧಪಟ್ಟ ಠಾಣೆಗಳಿಗೆ ಹಸ್ತಾಂತರಿಸಲಾಗಿದೆ. ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರವಿಕಾಂತೇಗೌಡ ಮಾರ್ಗ ದರ್ಶನದಲ್ಲಿ ಡಿಸಿಐಬಿ ಪೊಲೀಸ್‌ ನಿರೀಕ್ಷಕ ಸುನೀಲ್‌ ವೈ. ನಾಯ್ಕ ನೇತೃತ್ವÌದ ತಂಡ ಕಾರ್ಯಾಚರಣೆ […]