ಮರ ಬಿದ್ದು ಕಾರ್ಮಿಕ ದುರ್ಮರಣ

Tuesday, February 25th, 2020
umesh

ಮಡಿಕೇರಿ : ಮರ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಈರಳೆವಳವಾಡಿ ಗ್ರಾಮದ ಅಭ್ಯಾಲ ತೋಟದಲ್ಲಿ ನಡೆದಿದೆ. ನಾಕೂರು ಗ್ರಾಮದ ಉಮೇಶ್ ಎಂಬುವವರು ಇಂದು ಬೆಳಗ್ಗೆ ಸಹ ಕಾರ್ಮಿಕರೊಂದಿಗೆ ಮರವೊಂದನ್ನು ಕಡಿಯುವ ಕೆಲಸದಲ್ಲಿ ತೊಡಗಿದ್ದರು. ಮರಕ್ಕೆ ಕಟ್ಟಲಾಗಿದ್ದ ಹಗ್ಗವನ್ನು ಹಿಡಿದು ಎಳೆಯುತ್ತಿದ್ದಾಗ ಆಯತಪ್ಪಿ ಬಿದ್ದಿದ್ದಾರೆ. ದುರಾದೃಷ್ಟವಶಾತ್ ಅವರ ಮೇಲೆಯೇ ಮರ ಬಿದ್ದು, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದರು.    

ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

Saturday, October 27th, 2018
commission

ಮಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಳಸ ಎಂಬಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡದ ಎರಡು ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯ ಟೆಂಡರ್ಗೆ 52,58,302 ಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಪುನಗರದ ಆದಂ ಎಂಬವರು ಬಿಡ್ಡ್ ಮಾಡಿರುತ್ತಾರೆ. ಈ ಬಿಡ್ಡನ್ನು ಅನ್ ಲೈನ್ ನಲ್ಲಿ ಅವರ ತಂದೆಯವರ ಪರವಾಗಿ ಅವರಿಗೆ ವಯಸ್ಸಾಗಿರುವ ಕಾರಣ ಟೆಂಡರ್ ಆದಂ ಸಲ್ಲಿಸುತ್ತಿರುತ್ತಾರೆ . ಆದಂ ಸಹ ಬಿ.ಇ ಸಿವಿಲ್ ವ್ಯಾಸಂಗ ಮಾಡಿದ್ದು ತಂದೆಯವರೊಂದಿಗೆ 10 ವರ್ಷಗಳಿಂದ ಕಂಟ್ರಾಕ್ಟ್ ಕೆಲಸ […]

ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ

Thursday, October 4th, 2018
arrested

ಮಂಗಳೂರು: ಸರ್ಕಾರದಿಂದ ದೊರೆಯುವ ಬಯೋ ಗ್ಯಾಸ್ ಸಬ್ಸಿಡಿಗೆ ಎಜೆನ್ಸಿ ಮಾಲೀಕರೊಬ್ಬರಿಂದ ಮಂಗಳೂರು ಜಿ. ಪಂ ಕಚೇರಿಯಲ್ಲಿರುವ ಸಮಗ್ರ ಗ್ರಾಮೀಣ ಇಂಧನ ಯೋಜನೆಯ ಪ್ರಾಜೆಕ್ಟ್ ಅಧಿಕಾರಿ ಎನ್. ನಾಗೇಶ್ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಾಗೇಶ್ ಅವರು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಎಜೆನ್ಸಿ ಮಾಲೀಕರು 15 ಸಾವಿರ ನೀಡಿದ್ದರು. ಆದ್ರೆ ಉಳಿದ 35,000 ನೀಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಪೀಡಿಸುತ್ತಿದ್ದರು ಎಂದು ಏಜೆನ್ಸಿ ಮಾಲೀಕರು ಮಂಗಳೂರು ಭ್ರಷ್ಟಾಚಾರ ನಿಗ್ರಹ […]

ಕಳೆದ ಮೂರು ದಿನಗಳಿಂದ ಭಾರಿ ಮಳೆ..ಶಾಲೆಗಳಿಗೆ ರಜೆ ಘೋಷಣೆ!

Wednesday, July 11th, 2018
heavy-rain

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆ ಕಳೆದ ರಾತ್ರಿಯಿಂದ ಮತ್ತೆ ಮುಂದುವರೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಕಳಸ, ಬಾಳೆಹೊನ್ನೂರಿನಲ್ಲಿ ಇಡೀ ರಾತ್ರಿ ಮಳೆಯಾಗಿದೆ. ಶೃಂಗೇರಿಯಲ್ಲಿ ಕಳೆದ ಮೂರು ದಿನಗಳಿಂದಲೂ ಅಧಿಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಶೃಂಗೇರಿ ತಾಲೂಕಿನ ನದಿಪಾತ್ರ, ತಗ್ಗುಪ್ರದೇಶ ಹಾಗೂ ಪ್ರವಾಹ ಪೀಡಿತ ಪ್ರದೇಶದ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನ ಬಿಇಒ ಉಮೇಶ್ ಶಾಲೆಯ ಆಡಳಿತ ಮಂಡಳಿಗೆ ವಹಿಸಿದ್ದಾರೆ. ಉಳಿದಂತೆ ಕೊಪ್ಪ, ಎನ್.ಆರ್.ಪುರದಲ್ಲೂ ಮಳೆಯಾಗುತ್ತಿದ್ದು, ಬಿಟ್ಟು-ಬಿಟ್ಟು ಸುರಿಯುತ್ತಿರುವ […]

ಸಂತ ಅಲೋಶಿಯಸ್ ಕಾಲೇಜಿಗೆ ಇಂದು ಶತಾಯುಷಿ ಡಾ.ಸಾಲುಮರದ ತಿಮ್ಮಕ ಆಗಮನ..!

Tuesday, July 3rd, 2018
thimmakka

ಮಂಗಳೂರು: ನಗರದ ಸಂತ ಅಲೋಶಿಯಸ್ ಕಾಲೇಜಿಗೆ ಇಂದು ಶತಾಯುಷಿ ಡಾ.ಸಾಲುಮರದ ತಿಮ್ಮಕ್ಕ ಆಗಮಿಸಿದರು. ಕಾಲೇಜಿನ ವತಿಯಿಂದ ಹಮ್ಮಿಕೊಂಡಿರುವ ‘ವೃಕ್ಷಾಂಜಲಿ’ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು ಅಲೋಶಿಯಸ್ ಪಪೂ ಕಾಲೇಜು ಆವರಣದ ಸಂತ ಮದರ್ ತೆರೆಸಾ ಶಾಂತಿವನದಲ್ಲಿ ಎರಡು ಸಸಿಗಳನ್ನು ನೆಟ್ಟರು. ಕದಂಬ ಮತ್ತು ಸುರಗಿ ಎಂಬ ಎರಡು ಸಸಿಗಳನ್ನು ನೆಟ್ಟ ಸಾಲುಮರದ ತಿಮ್ಮಕ್ಕ ಅವರು ಅದಕ್ಕೆ ನೀರೆರೆದರು. ಬಳಿಕ ಕಾಲೇಜಿನ ಟ್ರೀ ಪಾರ್ಕ್‌ನಲ್ಲಿ ಪ್ರಣಾಳ ಗಿಡಗಳ ಉದ್ಯಾನವನ್ನು ಅವರು ಉದ್ಘಾಟಿಸಿದರು. ಇದೇ ಸಂದರ್ಭ […]

ನಾಲ್ಕನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್‌‌

Wednesday, December 28th, 2016
Umesh

ಮಂಗಳೂರು: ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಕೃತ್ಯ ಎಸಗಿರುವ ಆರೋಪಿ ಉಮೇಶ್ ಬಜರಂಗದಳದ ಕಾರ್ಯಕರ್ತ ಎನ್ನಲಾಗುತ್ತಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ.