ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪಡಿತರದಾರರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ಸರಬರಾಜು : ಉಮೇಶ್ ಕತ್ತಿ

Friday, May 28th, 2021
UmeshKatti

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನ ಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು […]

ದಿಲ್ಲಿಗೆ ಹೋಗಿ ಏನ್ ಮಾಡ್ತಿಯಾ?: ಯೋಗೇಶ್ವರ್ ಮೇಲೆ ರೇಣುಕಾಚಾರ್ಯ ಗರಂ

Friday, May 14th, 2021
Renukacharya

ದಾವಣಗೆರೆ: ಸಚಿವ ಸಿ. ಪಿ. ಯೋಗೇಶ್ವರ್ ವಿರುದ್ಧ ವಾಗ್ದಾಳಿ ಮತ್ತೆ ಮುಂದುವರೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸೋತರೂ ಮಂತ್ರಿ ಮಾಡಿದ್ದಕ್ಕೆ ದೆಹಲಿಯಲ್ಲಿ ಲಾಬಿ ಮಾಡ್ತೀಯಾ‌. ಯಾರೋ ಒಬ್ಬರು ಲಾಬಿ ಮಾಡಿದಾಕ್ಷಣ ಸಿಎಂ ಬದಲಾವಣೆ ಮಾಡ್ತಾರಾ. ಕೊರೊನಾ ಸಂಕಷ್ಟ ಇರುವ ಕಾರಣಕ್ಕೆ ರಾಜಕಾರಣ ಬೇಡ ಅಂತಾ ಸುಮ್ಮನಿದ್ದೇನೆ. ಇದೆಲ್ಲಾ ಮುಗಿದ ಮೇಲೆ ಮಾತನಾಡ್ತೇನೆ ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದ ಜನರು ಕುಡಿಯಲು ನೀರಿಲ್ಲ, ವೆಂಟಿಲೇಟರ್, ಆಕ್ಸಿಜನ್ […]

ಬಿಜೆಪಿ ಪಕ್ಷದಲ್ಲಿ ಉಮೇಶ್​ ಕತ್ತಿ ಬಹಳ ಹಿರಿಯರಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ : ಸಚಿವ ರಮೇಶ್​ ಜಾರಕಿಹೊಳಿ

Friday, February 14th, 2020
ramesh-jarakiholi

ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ನಾಯಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ ಎಂದು ಹೇಳುವ ಮೂಲಕ ಸಚಿವ ರಮೇಶ್ ಜಾರಕಿಹೊಳಿ ಅಚ್ಚರಿ ಮೂಡಿಸಿದ್ದಾರೆ. ಕಳೆದ 6 ತಿಂಗಳಿನಿಂದ ಸಿಎಂ ಬಿಎಸ್ವೈ ಕ್ಯಾಬಿನೆಟ್ನಲ್ಲಿ ಸಚಿವ ಸ್ಥಾನ ಪಡೆಯಲು ರಮೇಶ್ ಜಾರಕಿಹೊಳಿ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆದರೆ, ಈ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ಇದೀಗ ಕೊನೆಯ ಪ್ರಯತ್ನ ಎನ್ನುವಂತೆ ಉಮೇಶ್ ಕತ್ತಿ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರ ಬಳಿ ಸಚಿವ ಸ್ಥಾನಕ್ಕಾಗಿ ಲಾಬಿ […]

ಆಡಿಯೋ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ : ಮಾಜಿ ಸಚಿವ ಉಮೇಶ್ ಕತ್ತಿ, ಸಿಎಂ ಬಳಿ ಮನವಿ

Wednesday, November 6th, 2019
Audio-leak

ಬೆಂಗಳೂರು : ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಆಡಿಯೋ ಲೀಕ್ ಮಾಡಿದವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಿ ಎಂದು ಮಾಜಿ ಸಚಿವ ಉಮೇಶ್ ಕತ್ತಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ. ಇಂದು ಸಿಎಂ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿಎಸ್‌ವೈ ಅವರನ್ನು ಭೇಟಿಯಾದ ಕತ್ತಿ ಸುಮಾರು ಒಂದು ಗಂಟೆಗಳ ಕಾಲ ಜೊತೆ ಚರ್ಚೆ ನಡೆಸಿದರು. ಸಿಎಂ ಹಾಗೂ ಕತ್ತಿ ಚರ್ಚೆ ತೀವ್ರ ಕುತೂಹಲ ಮೂಡಿಸಿದ್ದು, ಆಡಿಯೋ ರೆಕಾರ್ಡ್ ಮಾಡಿದೋರು ಬೆಳಗಾವಿಯ ಅತೃಪ್ತ ಬಣ […]

ಅವಕಾಶ ಸಿಕ್ಕರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ‌ ರಚಿಸುತ್ತೇವೆ: ಉಮೇಶ್ ಕತ್ತಿ

Tuesday, June 26th, 2018
umesh-katthi

ಬೆಂಗಳೂರು: ಯಡಿಯೂರಪ್ಪ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ, ಇದರ ಬೆನ್ನಲ್ಲೇ ಮಾಜಿ ಸಚಿವ ಉಮೇಶ್‌ ಕತ್ತಿಯವರು ಅವಕಾಶ ಸಿಕ್ಕರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎನ್ನುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಚಿವ ಉಮೇಶ್‌ ಕತ್ತಿ ಮತ್ತು ಮುರುಗೇಶ್‌ ನಿರಾಣಿ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಡಾಲರ್ಸ್‌ ಕಾಲೊನಿ ನಿವಾಸಕ್ಕೆ ತೆರಳಿದ್ದರು. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಬಿಎಸ್‌ವೈ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ರಾಜಕೀಯ […]