ಎಮ್ಮೆಗಳನ್ನು ಖರೀದಿಸಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವ್ಯಾಪಾರಿಗೆ ಥಳಿಸಿದ ಕಾರ್ಯಕರ್ತರು
Sunday, June 14th, 2020ಮಂಗಳೂರು : ಎಮ್ಮೆಗಳನ್ನು ಖರೀದಿಸಿ ಮನೆಯಲ್ಲಿ ಸಾಕಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವ್ಯಾಪಾರಿಯನ್ನು ವಾಹನಕ್ಕೆ ಕಟ್ಟಿ ಸಂಘಪರಿವಾರದ ಕಾರ್ಯಕರ್ತರು ಥಳಿಸಿದ ಘಟನೆ ಭಾನುವಾರ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಜೋಕಟ್ಟೆ ನಿವಾಸಿ ಅಬ್ದುಲ್ ರಹ್ಮಾನ್ (34) ಎನ್ನಲಾಗಿದೆ. ಅಬ್ದುಲ್ ರಹ್ಮಾನ್ ಭಾನುವಾರ ಮುಂಜಾನೆ ತನ್ನ ಮನೆಯಲ್ಲಿದ್ದ ನಾಲ್ಕು ಎಮ್ಮೆಗಳನ್ನು ತುಂಬಿಕೊಂಡು ಮಂಗಳೂರಿನ ಕುದ್ರೋಳಿಯ ಕಸಾಯಿಖಾನೆಗೆ ತರುತ್ತಿದ್ದರು. ಇದನ್ನು ಗಮನಿಸಿದ ಸಂಘಪರಿವಾರದ ಕಾರ್ಯಕರ್ತರು ನಗರದ ಉರ್ವದಲ್ಲಿನ ಇನ್ಫೋಸಿಸ್ ಕಚೇರಿಯ ಸಮೀಪ ವಾಹನವನ್ನು ತಡೆದು ನಿಲ್ಲಿಸಿದ್ದು ವಿಚಾರಿಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ […]