ತಲಪಾಡಿ ಟೋಲ್‌ಗೇಟ್‌ ನಲ್ಲಿ ಹಣ ಪಡೆದು ಕಾರು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ದೂರು ದಾಖಲು

Thursday, November 30th, 2023
Tollgate

ಮಂಗಳೂರು : ಕಾರು ಚಾಲಕರೋರ್ವರನ್ನು ತಲಪಾಡಿ ಟೋಲ್‌ಗೇಟ್‌ ಸಿಬ್ಬಂದಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಕಾರು ಚಾಲಕ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಅಬ್ದುಲ್ ಕರೀಂ ಎಂಬವರ ಕಾರಿನ ಫಾಸ್ಟ್ ಟ್ಯಾಗ್ ನಿಂದ ಹಣ ಪಾವತಿಯಾದರೂ ಸಿಬ್ಬಂದಿ ಗೇಟ್ ತೆರೆಯದ ಕಾರಣ ಪ್ರಶ್ನಿಸಿದ್ದಾರೆ. ಈ ಸಂದರ್ಭ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ಬೈದಿದ್ದು, ಇದನ್ನು ಪ್ರಶ್ನಿಸಿದ ಕರೀಂ ಅವರ ಮೇಲೆ ಕೋಪಗೊಂಡ ಸಿಬ್ಬಂದಿ, ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಈ […]

ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ, ನಂತರ ವಿಹಾರಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ

Wednesday, April 28th, 2021
Nithin

ಮಂಗಳೂರು : ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೋರ್ವ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಉಳ್ಳಾಲಬೈಲ್ ನಿವಾಸಿ ನಿತಿನ್ (32) ನಾಪತ್ತೆಯಾದ ವ್ಯಕ್ತಿ. ನಿತಿನ್ ಸೋಮವಾರ ಮಧ್ಯಾಹ್ನ ಇಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿದ್ದ. ತದನಂತರ ಸಂಜೆ ಮೂವರು ಸೇರಿ ನೇತ್ರಾವತಿ ರೈಲ್ವೇ ಸೇತುವೆ ಬಳಿ ತೆರಳಿದ್ದರು. ಅಲ್ಲಿಂದ ನಿತಿನ್ ನಾಪತ್ತೆಯಾಗಿದ್ದಾನೆ ಎನ್ನಲಾಗ್ತಿದೆ. ಆ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ […]

ಅನಾಥಾಶ್ರಮಕ್ಕೆ ದೇಣಿಗೆ ನೀಡಲು ಹೊರಟ ಮಹಿಳೆ ನಿಗೂಢ ನಾಪತ್ತೆ !

Wednesday, March 3rd, 2021
Hinaj

ಉಳ್ಳಾಲ : ವಿದೇಶದಿಂದ ಬಂದ ಗರ್ಭಿಣಿ ಮಹಿಳೆಯೊಬ್ಬರು ಕಲ್ಲಾಪುವಿನಲ್ಲಿರುವ ಅನಾಥಾಶ್ರಮ ಶಾಲೆಗೆ ದೇಣಿಗೆ ಹಣವನ್ನು ನೀಡಲು ಹೋಗಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಮಾರ್ಚ್ 2 ರ ಮಂಗಳವಾರ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಗರ್ಭಿಣಿಯನ್ನು ಸೋಮೇಶ್ವರ ಒಂಬತ್ತುಕೆರೆ ನಿವಾಸಿ ಇಬ್ರಾಹಿಂ ಎಂಬವರ ಪತ್ನಿ ಹಿನಾಜ್(25) ಎಂದು ಗುರುತಿಸಲಾಗಿದೆ. ಹಿನಾಜ್ ಪತಿಯೊಂದಿಗೆ ವಿದೇಶದಲ್ಲಿದ್ದರು ಮತ್ತು ಕೆಲವು ವಾರಗಳ ಹಿಂದೆ ತಮ್ಮ ತವರೂರಿಗೆ ಮರಳಿದ್ದರು. ಪ್ರತಿಜ್ಞೆಯನ್ನು ಪೂರೈಸಲು ಹಣವನ್ನು ಹಸ್ತಾಂತರಿಸಲು […]

ಪ್ರವಾಸ ಬಂದಿದ್ದ ಬೆಂಗಳೂರಿನ ಬಾಲಕಿ ಸೋಮೇಶ್ವರ ಬೀಚಿನಲ್ಲಿ ನೀರುಪಾಲು

Monday, December 24th, 2018
someshwara

ಮಂಗಳೂರು: ಮಂಗಳೂರಿನ ಸೋಮೇಶ್ವರ ಬೀಚ್ಗೆ ಬಂದಿದ್ದ ಬೆಂಗಳೂರು ಮೂಲದ ಕುಟುಂಬ ಸಮುದ್ರದ ಸೆಳೆತಕ್ಕೆ ಸಿಲುಕಿದ ಪರಿಣಾಮ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ನಾಲ್ಕು ವರುಷದ ಬಾಲಕಿ ಮೈತ್ರೇಯಿ ಕೇತ್ಕರ್ ಸಾವನ್ನಪ್ಪಿದ ಬಾಲಕಿ. ಬೆಂಗಳೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದ ಕುಟುಂಬ ಸೋಮೇಶ್ವರ ಬೀಚಿನಲ್ಲಿ ಮೋಜು ಮಾಡುತ್ತಿದ್ದ ವೇಳೆ ಸಮುದ್ರದ ಸೆಳೆತಕ್ಕೆ ಸಿಕ್ಕಿದೆ. ಚಿಂತಾಮಣಿ ಕೇತ್ಕರ್, ಶ್ರದ್ದಾ ಕೇತ್ಕರ್ ಮತ್ತು ಅವರ ಮಕ್ಕಳಾದ ಏಳು ವರ್ಷದ ಜಾರ್ಜಿ ಕೇತ್ಕರ್ ಹಾಗೂ ಮೈತ್ರೇಯಿ ಕೇತ್ಕರ್ ಸಮುದ್ರದ ಸೆಳೆತಕ್ಕೆ ಸಿಲುಕಿದ್ದರು. ಸೋಮೇಶ್ವರ ಬೀಚಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೈಫ್ […]

ತಲಪಾಡಿ ನದಿ ತಟದಲ್ಲಿ ಮಗುವಿನ ಮೃತ ದೇಹ ಪತ್ತೆ

Thursday, July 11th, 2013
Talapady Infant Killed

ಮಂಗಳೂರು : ಕೆಲವೇ ದಿನಗಳ ಹಿಂದಷ್ಟೇ ಜನಿಸಿರಬಹುದಾದ ಪುಟ್ಟ ಮಗುವೊಂದು ತಲಪಾಡಿ ನದಿಯಲ್ಲಿ ಸತ್ತುಬಿದ್ದಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಸ್ಥಳೀಯರು ಇಂದು ಬೆಳಿಗ್ಗೆ  ನದಿ ತಟದಲ್ಲಿ ಮೃತ ಮಗುವನ್ನು ಪತ್ತೆ ಹಚ್ಚಿದರು. ಬಳಿಕ ಪಂಚಾಯತ್ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಮಗು ಗಂಡಾಗಿದ್ದು,  ಮಗುವಿನ ದೇಹದ ಮೇಲೆ ಕೆಲವು ಗಾಯದ ಗುರುತುಗಳಿದ್ದು ಅದು ಸಾವಿನ ನಂತರ ಉಂಟಾಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ. ಇದೀಗ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ, ಮೃತ ಮಗುವಿನ ಹೆತ್ತವರ ಬಗ್ಗೆ ಯಾವುದೇ ಸುಳಿವಿಲ್ಲ. ಈ […]