ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಸ್ಪಷ್ಟನೆ

Tuesday, March 30th, 2021
srinivasa poojary

ಮಂಗಳೂರು : ಕೋವಿಡ್ 19 ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ. ಕ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತ ಪಡಿಸಿದ್ದು, ಮರು ಸ್ಪಷ್ಟನೆ ನೀಡಲು ಜಿಲಾಧಿಕಾರಿಯವರಿಗೆ ಸೂಚನೆ ಕೊಟ್ಟಿರುವುದಾಗಿ ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಯಕ್ಷಗಾನ, ಕೋಲಾ, ನೇಮ, ಪೂಜೆ, ಜಾತ್ರೆ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ 19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. […]