12ನೇ ದಿನಕ್ಕೆ ಕಾಲಿಟ್ಟ ಎಂಡೋಸಲ್ಫಾನ್ ಸಂತ್ರಸ್ಥ ಜನಪರ ಒಕ್ಕೂಟದ ನಿರಾಹಾರ ಸತ್ಯಾಗ್ರಹ

Friday, March 1st, 2013
Endosulfan santrastha janapara okkuta

ಕಾಸರಗೋಡು : ಕಳೆದ ಹಲವು ದಿನಗಳಿಂದ ಎಂಡೋಸಲ್ಫಾನ್ ಸಂತ್ರಸ್ಥ ಜನಪರ ಒಕ್ಕೂಟದ ನೇತೃತ್ವದಲ್ಲಿ ಕಾಸರಗೋಡಿನ ಹೊಸ ಬಸ್ಸು ನಿಲ್ದಾಣ ಪರಿಸರದ ಸಹಿ ವೃಕ್ಷದಡಿ ನಡೆಸುತ್ತಿರುವ ನಿರಾಹಾರ ಸತ್ಯಾಗ್ರಹ 12ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎನ್.ಎ.ನೆಲ್ಲಿಕುನ್ನು ಎಂಡೋಸಲ್ಫಾನ್ ಸಂತ್ರಸ್ತರ ಸಾಲ ಮನ್ನಾ ಮಾಡುವ ಕುರಿತು ಸಮಿತಿಯೊಂದನ್ನು ನೇಮಿಸಿ, ಮಾನವ ಹಕ್ಕು ಆಯೋಗ ನೀಡಿದ ಸಲಹೆಯಂತೆ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಆದರೆ ಶಾಶ್ವತ […]