ಉಪವಾಸ ಸತ್ಯಾಗ್ರಹಕ್ಕೆ ಎಸ್.ಎಸ್.ಎಫ್ ಜಿಲ್ಲಾ ಸಮಿತಿ ಬೆಂಬಲ : ಎಂ.ಸಿ.ನಾಣಯ್ಯ,.ಕೆ ಎಂ.ಇಬ್ರಾಹಿಂ ಭೇಟಿ
Thursday, January 30th, 2020ಮಡಿಕೇರಿ : ಪೌರತ್ವ ಕಾಯ್ದೆ ವಿರುದ್ಧ ಪ್ರಗತಿಪರ ಜನಾಂದೋಲನ ವೇದಿಕೆ ಗಾಂಧಿ ಮಂಟಪದ ಬಳಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಎಸ್.ಎಸ್.ಎಫ್ ನ ಜಿಲ್ಲಾ ಸಮಿತಿ ಪ್ರಮುಖರು ಬೆಂಬಲ ಸೂಚಿಸಿ ಧರಣಿಯಲ್ಲಿ ಪಾಲ್ಗೊಂಡರು. ಎಸ್.ಎಸ್.ಎಫ್ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಸಖಾಫಿ ಕೊಡ್ಲಿಪೇಟೆ ಅವರು ಮಾತನಾಡಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆಯುವ ಯಾವುದೇ ಅನ್ಯಾಯಗಳನ್ನು ಪ್ರತಿಭಟಿಸುವ ಮಂದಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದರು. ನಿರುದ್ಯೋಗ, ಬೆಲೆ ಏರಿಕೆಯಂತಹ ಆಡಳಿತಾತ್ಮಕ ವೈಫಲ್ಯಗಳನ್ನು ಮರೆಮಾಚಿ ಸಮಾಜವನ್ನುಒಡೆದು ಆಳುವ ಮನೋಭಾವವನ್ನು ಆಡಳಿತ […]