ನಾನು ಗೆದ್ದರೆ ಮಂಗಳೂರು ಜನತೆಯ ಹೆಮ್ಮೆ- ಎಂ ಎನ್ ರಾಜೇಂದ್ರ ಕುಮಾರ್

Friday, March 22nd, 2019
MN-Rajendrakumar

ಮಂಗಳೂರು: ಕಾಂಗ್ರೆಸ್ ಸ್ಪರ್ದೆಗೆ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ. ನಾನು ಗೆದ್ದರೆ ಮಂಗಳೂರು ಜನತೆಯ ಹೆಮ್ಮೆ ಎಂದು ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ನಾನು ಆಕಾಂಕ್ಷಿಯಲ್ಲದೆ ಇದ್ದರೂ ಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನನ್ನ ಹೆಸರು ಮುಂಚೂಣಿಯಲ್ಲಿದೆ. ಕಾಂಗ್ರೆಸ್ ನನಗೆ ಸಾಕಷ್ಟು ಸಹಾಯ ‌ಮಾಡಿದೆ. ಆ ಕಾರಣದಿಂದ ಕಾಂಗ್ರೆಸ್ನಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು. ಜರ್ನಾರ್ದನ ಪೂಜಾರಿ ಅವರು ತನ್ನ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜೇಂದ್ರ ಕುಮಾರ್, 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ […]

ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮೊಳಹಳ್ಳಿ ಶಿವರಾವ್ ಪುರಸ್ಕಾರ

Tuesday, November 2nd, 2010
ದಿ| ಮೊಳಹಳ್ಳಿ ಶಿವರಾವ್ ಸ್ಮರಣಾರ್ಥಕ

ಮಂಗಳೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಹಕಾರಿ ಪಿತಾಮಹ ದಿ| ಮೊಳಹಳ್ಳಿ ಶಿವರಾವ್ ಸ್ಮರಣಾರ್ಥಕ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೊಳಹಳ್ಳಿ ಶಿವರಾವ್ ಸ್ಮಾರಕ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ಇಂದು ಸಂಜೆ ನಡೆಯಿತು. ಪ್ರತಿಭಾನಿವಿತರನ್ನು ರೆ| ಪಾ| ಜೋಸೆಫ್ ರೊಡ್ರಿಗಸ್ ಎಸ್. ಜೆ. ಶಾಲು ಹೊದಿಸಿ ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ […]