ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸಿ ಖಮರುದ್ದೀನ್ ಹಣ ಪಡೆದು ವಿರುದ್ಧ ವಂಚನೆ

Saturday, August 29th, 2020
Kamaruddin

ಮಂಜೇಶ್ವರ : ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಯುಡಿಎಫ್ ಶಾಸಕ ಎಂ. ಸಿ ಖಮರುದ್ದೀನ್ ಠೇವಣಿದಾರರಿಂದ ಹಣ ಪಡೆದು ವಂಚನೆ ನಡೆಸಿರುವುದಾಗಿ ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫ್ಯಾಶನ್ ಗೋಲ್ಡ್ ಜುವೆಲ್ಲರಿ ಅಧ್ಯಕ್ಷರಾಗಿರುವ ಎಂ. ಸಿ ಖಮರುದ್ದೀನ್ ಜುವೆಲ್ಲರಿಗೆ ಠೇವಣಿ ಇರಿಸಿದ ಆರಿಫ್, ಅಬ್ದುಲ್ ಶುಕೂರ್ ಹಾಗೂ ಝುಹರಾ ಎಂಬವರು ನೀಡಿದ ದೂರಿನಂತೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಚೆರ್ವತ್ತೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಫ್ಯಾಶನ್ ಗೋಲ್ಡ್ ಪಯ್ಯನ್ನೂರು, ಚೆರ್ವತ್ತೂರು ಹಾಗೂ ಕಾಸರಗೋಡಿನಲ್ಲಿರುವ […]

ಮಂಜೇಶ್ವರ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಗೆಲುವು

Thursday, October 24th, 2019
UDF

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ ಕುಂಟಾರು ಅವರನ್ನು 7,923 ಮತಗಳ ಅಂತರದಿಂದ ಸೋಲಿಸಿದ ಖಮರುದ್ದೀನ್, ಎಲ್‌ಡಿಎಫ್ ಅನ್ನು ಮತ್ತೊಮ್ಮೆ ತೃತೀಯ ಸ್ಥಾನಕ್ಕೆ ತಳ್ಳಿದ್ದಾರೆ. ಆರಂಭದಲ್ಲೇ ಮುನ್ನಡೆ ಸಾಧಿಸಿದ್ದ ಖಮರುದ್ದೀನ್ ಕೊನೆಯವರೆಗೂ ಅದನ್ನು ಕಾಯ್ದುಕೊಂಡರಲ್ಲದೇ, ಹಂತ ಹಂತವಾಗಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದರು. ಅಂತಿಮವಾಗಿ  7,923 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ […]

ಮಂಜೇಶ್ವರ : ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭ

Thursday, October 24th, 2019
Manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ. ಆದರೆ ಪ್ರಥಮ ಸುತ್ತು ಮುಗಿಯುತ್ತಿದ್ದಂತೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ಸುತ್ತಿನ ಮತ ಎಣಿಕೆಯನ್ನು ಮರು ಎಣಿಕೆ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ಎಣಿಕೆ ಮಾಡಲಾಗಿದ್ದ ಮತಗಳ ಮರು ಎಣಿಕೆ ಮಾಡಲಾಗುತ್ತಿದೆ. ಈ ವೇಳೆ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರು ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.