ಎಐಸಿಸಿ ಸದಸ್ಯರಾಗಿ ಕವಿತಾ ಸನಿಲ್ ನೇಮಕ

Wednesday, March 14th, 2018
kavitha-sanil

ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸದಸ್ಯರಾಗಿ ಮಂಗಳೂರು ಮಹಾನಗರ ಪಾಲಿಕೆ ನಿಕಟಪೂರ್ವ ಮೇಯರ್ ಕವಿತಾ ಸನಿಲ್ ನೇಮಕವಾಗಿದ್ದಾರೆ. ಕವಿತಾ ಸನಿಲ್ ಅವರು ಮನಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನಗರ ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಂಗಳೂರು ಮಹಾನಗರದ ಮೇಯರ್ ಹುದ್ದೆ ಅಲಂಕರಿಸಿದ್ದರು. ಇವರ ಕಾರ್ಯವೈಖರಿಗೆ ಪಕ್ಷದ ಹಿರಿಯ ಮುಖಂಡರು ಶ್ಲಾಘನೆ ವ್ಯಕ್ತಪಡಿಸಿ ಇದೀಗ ಎಐಸಿಸಿ ಸದಸ್ಯರಾಗಿ ನೇಮಕಗೊಳಿಸಿದ್ದಾರೆ.

ಜ.27ರಂದು ರಾಹುಲ್ ಗಾಂಧಿ ರಾಜ್ಯಕ್ಕೆ, ವಿವಿಧ ಜಿಲ್ಲೆಗೆ ಭೇಟಿ

Thursday, January 4th, 2018
rahul-gandhi

ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನವರಿ 27ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಮೈಸೂರು ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ‘ಜನವರಿ 27ರಂದು ರಾಹುಲ್ ಗಾಂಧಿ ಹೊಸಪೇಟೆಯಲ್ಲಿ ಪರಿಶಿಷ್ಟ ಪಂಗಡದ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದರು. ಜನವರಿ 28ರಂದು ಚಿಕ್ಕಬಳ್ಳಾಪುರಕ್ಕೆ ಅವರು ಭೇಟಿ ನೀಡುತ್ತಿದ್ದು, ವಿದುರಾಶ್ವಥದಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಅಂದು ಮೈಸೂರಿಗೂ ಭೇಟಿ ನೀಡಿ ವಿದ್ಯಾರ್ಥಿಗಳು, ಚಿಂತಕರೊಂದಿಗೆ ಸಂವಾದ ನಡೆಸಲಿದ್ದಾರೆ. ಕರ್ನಾಟಕದಲ್ಲಿ […]

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ `ಮುಸ್ಲಿಂ’ ನಾಯಕ?

Wednesday, January 30th, 2013

ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಯ ಸೂಚನೆಯಂತೆ ಮುಂದಿನ ವಿಧಾನ ಸಭ ಚುನಾವಣೆ ಸಂದರ್ಭ ಅನುಸರಿಸಬೇಕಾದ ಮಾರ್ಗಸೂತ್ರದ ಅನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಒಂದಷ್ಟು ಬದಲಾವಣೆಯ ಗಾಳಿ ಬೀಸತೊಡಗಿದೆ. `ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಸೂತ್ರವನ್ನು ಅನುಸರಿಸಿ ಎಂದು ಹೈಕಮಾಂಡ್ ಸ್ಪಷ್ಟ ಸೂಚನೆ ಹೊರಡಿಸಿದರೆ, ಬಂಟ್ವಾಳ ಶಾಸಕರೂ ಆಗಿರುವ ರಮಾನಾಥ ರೈ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಹಾಗಾಗಿ ಸಹಜವಾಗಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ […]