ನಿರಂತರ ಮಳೆ – ಎಕ್ಕೂರು, ಜಪ್ಪಿನಮೊಗರು, ಕಲ್ಲಾಪು ಪ್ರದೇಶ ಜಲಾವೃತ

Friday, September 11th, 2020
Jappiana Mogaru

ಮಂಗಳೂರು : ನಿರಂತರವಾಗಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ  ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು ಎಕ್ಕೂರು, ಜಪ್ಪಿನಮೊಗರು, ಕಲ್ಲಾಪು ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದರಿಂದಾಗಿ ಶುಕ್ರವಾರ  ಮುಂಜಾನೆಯ ವೇಳೆ ಜಪ್ಪಿನಮೊಗರು ಸುತ್ತಮುತ್ತ ಹಲವು ಮನೆಗಳು, ಫ್ಲ್ಯಾಟ್‌ಗಳ ಒಳಗೆ ನೆರೆ ನೀರು ನುಗ್ಗಿದೆ. ಗುರುವಾರ ತಡರಾತ್ರಿಯಿಂದ ಮಳೆ ಮತ್ತಷ್ಟು ಬಿರುಸುಗೊಂಡಿದ್ದರಿಂದ  ‘‘ಜಪ್ಪಿನಮೊಗರು ಆಸುಪಾಸಿನ ಸುಮಾರು 50 ಮನೆಗಳಿಗೆ ಮಳೆ ನೀರು ನುಗ್ಗಿದೆ. ಮನೆಯಲ್ಲಿರುವ ಸಾಮಗ್ರಿಗಳು ಮಳೆ ನೀರಿನಿಂದಾಗಿ ಸಂಪೂರ್ಣವಾಗಿ ನಿರುಪಯುಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ದಳದ ತಂಡ ದೋಣಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಈಗಾಗಲೇ […]

ಮಂಗಳೂರು: ಲಾರಿ ಡಿಕ್ಕಿ, ಬೈಕ್ ಸವಾರ‌ ಸ್ಥಳದಲ್ಲೇ ಮೃತ

Tuesday, June 11th, 2019
sidiq

ಮಂಗಳೂರು: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ, ನಗರದ ಹೊರವಲಯದ ಎಕ್ಕೂರು ಬಳಿ ಸೋಮವಾರ ಸಂಜೆ ಸಂಭವಿಸಿದೆ. ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಮೃತ ಬೈಕ್ ಸವಾರ‌. ಈತ ಬೈಕ್ನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಲ್ಲಿ ಬರುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ, ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಿದ್ದೀಕ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟದ್ದಾನೆ. ಸ್ಥಳಕ್ಕೆ ದಕ್ಷಿಣ ಠಾಣೆಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, […]

ಎಕ್ಕೂರಿನಲ್ಲಿ ಬಸ್-ಬೈಕ್ ಡಿಕ್ಕಿ, ಸ್ಥಳದಲ್ಲೇ ಮೃತಪಟ್ಟ ಸಹೋದರರು

Thursday, April 4th, 2013
Two brothers killed at Yekkur

ಮಂಗಳೂರು : ಎಕ್ಕೂರಿನಲ್ಲಿ ಇಂದು ಬೆಳಗ್ಗೆ ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೋಟಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಶಾರದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತರನ್ನು ಉಮರ್ ರಶೀದ್, ಮಹಮ್ಮದ್ ನೌಶಾದ್ ಎಂದು ಗುರುತಿಸಲಾಗಿದ್ದು ಇವರಿಬ್ಬರು ತೊಕ್ಕೋಟಿನ ಮಹಮ್ಮದ್ ಎಂಬುವವರ ಮಕ್ಕಳಾಗಿದ್ದಾರೆ. ಉಮರ್ ರಶೀದ್ ಬಿ.ಕಾಂ ಪದವಿಧರನಾಗಿದ್ದು, ಮೆಡಿಕಲ್ ಶಾಪ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೌಶಾದ್ […]