ಮೈಸೂರು : ಊಟದಲ್ಲಿ ಹುಳುಗಳು ಪತ್ತೆ; ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ

Wednesday, January 8th, 2020
mysuru

ಮೈಸೂರು : ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿನ ಆದರ್ಶ ಶಾಲೆಯಲ್ಲಿ ಸೋಮವಾರ ಮದ್ಯಾಹ್ನ ಊಟದಲ್ಲಿ ಹುಳುಗಳು ಪತ್ತೆಯಾಗಿದ್ದು, ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 6ನೇ ತರಗತಿ ವಿದ್ಯಾರ್ಥಿಗಳು ಮಾತ್ರ ಊಟ ಸೇವಿಸಿದ್ದರು. ಊಟದಲ್ಲಿ ಹುಳು ಕಂಡೊಡನೆ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೆ ಎಚ್ಚೆತ್ತು ಶಾಲಾ ಸಿಬ್ಬಂದಿಗಳು ಇತರ ವಿದ್ಯಾರ್ಥಿಗಳ ಊಟ ಸ್ಥಗಿತಗೊಳಿಸಿದರು. ಸುಜಾತಾ ಮತ್ತು ಅಬ್ರಹಂ ಎಂಬ ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಯಿತು. ಉಳಿದ […]

ಅಪ್ರಾಪ್ತೆ ಮೇಲೆ ನಾಲ್ಕು ದಿನ ಸತತ ಅತ್ಯಾಚಾರ: ಕಾಮುಕನ ಬಂಧನ

Monday, December 24th, 2018
attacked

ಮೈಸೂರು: 14 ವರ್ಷದ ಅಪ್ರಾಪ್ತೆಯನ್ನು ಅಮಾನುಷವಾಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕೊಳವಿಗೆ ಗ್ರಾಮದ ದಿನೇಶ (27) ಬಂಧಿತ. ಕಳೆದ ನಾಲ್ಕು ದಿನಗಳಿಂದ ಅಪ್ರಾಪ್ತೆ ಮೇಲೆ ಸತತ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಈತನ ವಿರುದ್ಧ ಹುಡುಗಿ ಪೋಷಕರು ದೂರು ದಾಖಲಿಸಿದ್ದರು. ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಈತನಿಗಾಗಿ ಎಚ್.ಡಿ.ಕೋಟೆ ಮತ್ತು ಸರಗೂರು ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕಡೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ನ್ಯಾಯಾಂಗ […]