ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಎನ್ ಕೌಂಟರ್ : ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ ಪೊಲೀಸರು

Monday, February 17th, 2020
dehali

ಹೊಸದಿಲ್ಲಿ : ಇಂದು ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ದಿಲ್ಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು, ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಹತ್ಯೆಯಾದವರು. ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದೆ. ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ವರದಿಯ ಪ್ರಕಾರ, ಪೊಲೀಸರು […]

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ನಾಲ್ವರು ಆರೋಪಿಗಳ ಎನ್ ಕೌಂಟರ್

Friday, December 6th, 2019
Hydarbad

ಹೈದರಾಬಾದ್ : ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. […]

ಪಶ್ಚಿಮ ಘಟ್ಟದ ಪರಿಸರದಲ್ಲಿ 2 ದಶಕಗಳಿಂದ ಸಕ್ರಿಯರಾಗಿದ್ದ ನಾಲ್ವರು ನಕ್ಸಲೀಯರು ಶರಣು

Tuesday, November 15th, 2016
naxal-leaders

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ಪರಿಸರದಲ್ಲಿ ಕಳೆದ 2 ದಶಕಗಳಿಂದ ಸಕ್ರಿಯರಾಗಿದ್ದ ನಾಲ್ವರು ಪ್ರಮುಖ ನಕ್ಸಲೀಯರು ನಕ್ಸಲ್ ಪ್ಯಾಕೇಜ್ ನಡಿ ಸೋಮವಾರ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಮುಂದೆ ಚಿಕ್ಕಮಗಳೂರಿನಲ್ಲಿ ಶರಣಾಗಿದ್ದಾರೆ. ನಕ್ಸಲ್ ಮುಖಂಡರಾದ ನೀಲಗುಣಿ ಪದ್ಮನಾಭ, ರಿಜ್ವಾನ್ ಬೇಗಂ, ರಾಜು, ಭಾರತಿ ಸೇರಿದಂತೆ ನಾಲ್ವರು ನಕ್ಸಲೀಯರು ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಎಕೆ ಸುಬ್ಬಯ್ಯ ಮುಂದಾಳತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಶರಣಾಗಿದ್ದಾರೆ. ನಾಲ್ವರು ನಕ್ಸಲೀಯರು ಗೌರಿ ಲಂಕೇಶ್ ಜೊತೆ ಇಂದು ಮಧ್ಯಾಹ್ನ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ನಕ್ಸಲೀಯರಾದ ಪದ್ಮನಾಭ, ರಾಜು, ಭಾರತಿ […]