ಬಾಲಕಾರ್ಮಿಕರ ಪುನರ್ವಸತಿಯು ಮುಖ್ಯ ಚೌಡಪುರ್ಕರ್ ಅರುಣ್

Wednesday, June 12th, 2013
Bala Karmika

ಮಂಗಳೂರು : ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿಷೇಧಕ್ಕೆ ಎಲ್ಲರೂ ಅಸ್ಥೆ ವಹಿಸಬೇಕು.  ಬಾಲಕಾರ್ಮಿಕರ ಪುನರ್ವಸತಿಗೆ ಪರಿಣಾಮಕಾರಿಯಾಗಿ ಯೋಜನೆ ರೂಪಿಸಬೇಕೆಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮತ್ತು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶ್ರೀ ಚೌಡಪುರ್ಕರ್ ಅರುಣ್ ಅವರು ಹೇಳಿದರು. ಅವರು ಇಂದು ನಗರದ ಪುರಭವನದಲ್ಲಿ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು […]

ಮುಂಗಾರು ಮಳೆಯಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪಕ್ಕೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ

Thursday, May 23rd, 2013
N Prakash

ಮಂಗಳೂರು : ಮುಂಗಾರು ಶೀಘ್ರವೇ ಜಿಲ್ಲೆಗೆ ಕಾಲಿಡಲಿದ್ದು, ಅದಕ್ಕೂ ಮುನ್ನ ಪಾಲಿಕೆ ವ್ಯಾಪ್ತಿಯಲ್ಲಿನ ಚರಂಡಿ ಮತ್ತು ಕಾಲುವೆಗಳನ್ನು ಶುಚಿಗೊಳಿಸಿ ಕೃತಕ ನೆರೆ ಉಂಟಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಹೇಳಿದರು. ಅವರು ಬುಧವಾರ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಹಾಗು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಾಲಿಕೆ ಮತ್ತು ತಾಲೂಕು ವ್ಯಾಪ್ತಿಯಲ್ಲಿ, ಮುಂಬರುವ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಬಗ್ಗೆ ಮುಂಜಾಗ್ರತೆ ವಹಿಸುವಂತೆ ತಿಳಿಸಿದ ಅವರು ಮೇ 25 ರೊಳಗೆ ಸಹಾಯಕ ಕಮೀಷನರ್ […]

ನಿಗಧಿತ ಅವಧಿಯಲ್ಲಿ ಪಾಲಿಕೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಸೂಚನೆ

Thursday, May 16th, 2013
N.Prakash

ಮಂಗಳೂರು : ಮಳೆಗಾಲ ಪ್ರಾರಂಭವಾಗುವುದಕ್ಕು ಮುನ್ನ ನಗರದ ಚರಂಡಿಗಳ ಹೂಳೆತ್ತುವಿಕೆ ಕಾಮಗಾರಿಗಳನ್ನು ಮೇ 25 ರೊಳಗೆ ಪೂರ್ಣಗೊಳಿಸಬೇಕೆಂದು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಹಾಗು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ತಿಳಿಸಿದರು. ಅವರು ಬುಧವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾದ ಅಭಿವೃದ್ಧಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಪಾಲಿಕೆ ಮುಖ್ಯ ಅಧೀಕ್ಷಕ ಎಂಜಿನಿಯರ್ ಬಿ.ಎಸ್.ಬಾಲಕೃಷ್ಣ ಮಾತನಾಡಿ, ನೆರೆ ಪೀಡಿತ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, 10 ತಂಡಗಳ ಟಾಸ್ಕ್ಫೋರ್ಸ್‌ ರಚಿಸಲಾಗಿದೆ. ಇನ್ನುಳಿದಂತೆ  ಪಾಲಿಕೆಯಲ್ಲಿ ಈಗಾಗಲೇ 71 ಲಕ್ಷ ರೂಪಾಯಿ […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ವರ್ಗಾವಣೆ ಸಾಧ್ಯತೆ

Wednesday, March 27th, 2013
N. Prakash

ಮಂಗಳೂರು : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಆದೇಶದಂತೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪ್ರಾರಂಭವಾಗಿದ್ದು, ರಾಜ್ಯಾದ್ಯಂತ 12 ಜಿಲ್ಲಾಧಿಕಾರಿಗಳು ಸೇರಿದಂತೆ 20 ಮಂದಿ ಐ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಕೂಡ ಸೇರಿದ್ದಾರೆ. ಎನ್. ಪ್ರಕಾಶ್ ಜಾಗಕ್ಕೆ ನೂತನ ಜಿಲ್ಲಾಧಿಕಾರಿ ಹರ್ಷ ಗುಪ್ತ ನೇಮಕಗೊಳ್ಳುವ ಸಾಧ್ಯತೆ ಇದೆ. ಮೂಲತಃ  ದೆಹಲಿಯವರಾಗಿರುವ ಹರ್ಷ 1997ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ದೆಹಲಿಯಲ್ಲಿ ಸೇವೆ ಸಲ್ಲಿಸಿದ್ದ ಇವರು […]

ರಾಜ್ಯ ವಿಧಾನ ಸಭಾ ಚುನಾವಣೆ : ಏಪ್ರಿಲ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನ

Friday, March 22nd, 2013
DC office press meet

ಮಂಗಳೂರು : ಮೇ ೫ ರಂದು ರಾಜ್ಯ ವಿಧಾನ ಸಭಾ ಚುನಾವಣೆಯು ನಡೆಯಲಿದ್ದು ಚುನಾವಣೆಗೆ ಸಂಬಂಧಪಟ್ಟಂತೆ  ದ.ಕ. ಜಿಲ್ಲಾಡಳಿತವು ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಹೇಳಿದರು. ಶುಕ್ರವಾರ ಜಿಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು, ದಿನಾಂಕವನ್ನು ಪ್ರಕಟಿಸಿರುವುದರಿಂದ ಮೇ 11 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಬಾರಿ ಚುನಾವಣೆಯಲ್ಲಿ  7,25,162 ಪುರುಷ ಮತದಾರರು, 7,36,497 ಮಹಿಳಾ ಮತದಾರರು ಸೇರಿ ಒಟ್ಟು […]

ದ.ಕ. ಜಿಲ್ಲಾಡಳಿತದಿಂದ ಮತದಾರರ ಹೆಸರು ಪರಿಶೀಲಿಸಲು ಸಹಾಯವಾಣಿ ಪ್ರಾರಂಭ : ಎನ್.ಪ್ರಕಾಶ್

Thursday, March 21st, 2013
SVEEP

ಮಂಗಳೂರು : ಮತದಾರರ ಪಟ್ಟಿಯಲ್ಲಿ  ನೂತನವಾಗಿ ಹೆಸರು ಸೇರ್ಪಡೆಗೊಳಿಸಲು ಹಾಗು ಪ್ರತಿ ಚುನಾವಣಾ ಸಂದರ್ಭದಲ್ಲೂ ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟು ಹೋಗಿರುವುದು, ಹಾಗು ಇನ್ನಿತರೇ ಹಲವಾರು ಸಮಸ್ಯೆಗಳು ಮತದಾನದ ವೇಳೆಯಲ್ಲಿ ಕಂಡುಬರುತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ರೀತಿಯ ಗೊಂದಲಗಳು ಮರುಕಳಿಸದಂತೆ ಮಾಡಲು ದ.ಕ. ಜಿಲ್ಲಾಡಳಿತವು ಜಿಲ್ಲೆಯ ಪಾಲಿಕೆ ಹಾಗೂ ಎಲ್ಲಾ ಪುರಸಭೆ, ನಗರಸಭೆ, ತಹಶೀಲ್ದಾರ್ ಕಚೇರಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿ […]

ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಜಾಗೃತಿ ನಡೆಯಬೇಕು : ಜಿಲ್ಲಾಧಿಕಾರಿ

Friday, March 15th, 2013
Consumer Day

ಮಂಗಳೂರು : ದ.ಕ ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ) ದ.ಕ ಜಿಲ್ಲೆ ಹಾಗೂ ಗ್ರಾಹಕ ಸಂಘ ಮತ್ತು ಯೋಜನಾ ವೇದಿಕೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ. ವಿಶ್ವ ಗ್ರಾಹಕ ದಿನಾಚರಣೆ ಮತ್ತು ಗ್ರಾಹಕ ಶಿಕ್ಷಣ ಸರ್ಟಿಪಿಕೇಟ್ ಪ್ರದಾನ ಸಮಾರಂಭವನ್ನು ಮಾರ್ಚ್ 15 ಶುಕ್ರವಾರ ಬೆಳಿಗ್ಗೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದ.ಕ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ […]

ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

Saturday, March 2nd, 2013
dco election

ಮಂಗಳೂರು : ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ರೂಪಿಸಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕೋರ್ಟ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವ ವಾಹನಗಳ ನೋಂದಣಿ ಸಂಖ್ಯೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ನೀಡಿ ಅವರಿಂದ ಅನುಮತಿ ಪತ್ರ ಬರೆದು ಅದನ್ನು ಉಪಯೋಗಿಸುತ್ತಿರುವ ವಾಹನದಲ್ಲಿ ಅಂಟಿಸಿ ಚುನಾವಣಾ ಪ್ರಚಾರ ಮಾಡಲು ಅವಕಾಶವಿದೆ, ಚುನಾವಣಾ ಪ್ರಚಾರಕ್ಕಾಗಿ ಅನುಮತಿ ಪಡೆದ ಧ್ವನಿ ವರ್ಧಕಗಳನ್ನು […]

ಜಿಲ್ಲಾಧಿಕಾರಿಗಳಿಂದ ನಗರದ ನೈರ್ಮಲ್ಯ ಪರಿಶೀಲನೆ

Wednesday, February 27th, 2013
city's sanitation inspection

ಮಂಗಳೂರು  : ಇಂದು ಬೆಳಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯೂ ಆದ ಶ್ರೀ ಎನ್. ಪ್ರಕಾಶ್ ಅವರು  ಮಾನ್ಯ ಆಯುಕ್ತರು ಹಾಗೂ ಪರಿಸರ ಅಭಿಯಂತರರೊಂದಿಗೆ ಪಾಲಿಕಾ ವ್ಯಾಪ್ತಿಯೊಳಗಿನ ಘನತ್ಯಾಜ್ಯ ವಿಲೇವಾರಿ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿ ಕೆಲ  ಪ್ರದೇಶಗಳಿಗೆ ಸ್ವತಹ ಸಂದರ್ಶಿಸಿ ಪರಿಶೀಲನೆ ನಡೆಸಿದರು. ನಗರದ ಫಳ್ನೀರು ರಸ್ತೆ, ಕಂಕನಾಡಿ, ಶಾಂತಿನಿಲಯ ರಸ್ತೆ, ನಂದಿಗುಡ್ಡ, ಪಾಂಡೇಶ್ವರ, ಕೋರ್ಟ್, ದಕ್ಕೆ, ಸೆಂಟ್ರಲ್ ಮಾರ್ಕೆಟ್, ರಥಬೀದಿ, ಬಂದರು, ಕುದ್ರೋಳಿ, ಮಣ್ಣಗುಡ್ಡೆ, ಉರ್ವ, ಕೊಟ್ಟಾರ, ಬಿಜೈ, ಕದ್ರಿ, ಶಿವಭಾಗ್, […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

Thursday, February 21st, 2013
MCC administrator

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರು ಇಂದು ಪಾಲಿಕೆಯ ಆಯುಕ್ತರಾಗಿರುವ ಹರೀಶ್ ಕುಮಾರ್ ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡರು. ಮಾರ್ಚ್ 7ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು  ನಡೆಸಲು ಚುನಾವಣಾ ಆಯೋಗವು ನಿರ್ಧರಿಸಿರುವುದರಿಂದ, ಹಾಗು ಈಗಾಗಲೇ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳ ಅಧಿಕಾರ ವ್ಯಾಪ್ತಿಯು ಮುಗಿದಿರುವುದರಿಂದ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರು ಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಬಳಿಕ ಮಾತನಾಡಿದ ಅವರು ಈಗಾಗಲೇ ಪ್ರಾರಂಭವಾಗಿರುವ ಎಲ್ಲಾ ಕಾಮಗಾರಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು […]