ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನಿಗೆ ಹಲ್ಲೆ, ಮಕ್ಕಳ ಕಲ್ಯಾಣ ಇಲಾಖೆಗೆ ದೂರು

Friday, November 5th, 2021
Arecanut Thief

ಸುಳ್ಯ :  ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನಿಗೆ ಹಲ್ಲೆ ನಡೆಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ  ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಮಾತ್ರವಲ್ಲದೆ ಹಲ್ಲೆ ನಡೆಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. […]

11 ಮರಳು ಸಾಗಣೆ ಲಾರಿ ವಶ

Thursday, April 7th, 2011
ಮರಳು ಸಾಗಣೆ ಲಾರಿ ವಶ

ಮಂಗಳೂರು : ಮಂಗಳೂರು ತಾಲೂಕು ವ್ಯಾಪ್ತಿಯ ಅಡ್ಯಾರ್, ಉಳಾಯಿಬೆಟ್ಟು ಮತ್ತು ಬಂಟ್ವಾಳ ತಾಲೂಕಿನ ಪೊಳಲಿ, ಬರಿಮಾರ್ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ 11 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 5 ಮರಳು ತುಂಬಿದ ಲಾರಿಗಳು ಮತ್ತು 6 ಖಾಲಿ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಕಂದಾಯ ಇಲಾಖೆ ಈ ದಾಳಿಯ ನೇತೃತ್ವ ವಹಿಸಿತ್ತು. ಗಣಿ ಇಲಾಖೆ ಅಧಿಕಾರಿಗಳು ಬಳಿಕ ಘಟನಾ ಸ್ಥಳಕ್ಕೆ ತಲುಪಿ ಕಾನೂನು ಕ್ರಮಕೈಗೊಂಡಿದ್ದಾರೆ. 420, 379 ನಿಯಮಗಳಡಿ ಎಫ್ ಐ ಆರ್ ದಾಖಲಿಸಿದ್ದು, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. […]