ಕನ್ಹಯ್ಯ ಕುಮಾರ್ ಮಂಗಳೂರು ಆಗಮನಕ್ಕೆ ಎಬಿವಿಪಿ ಪ್ರತಿರೋಧ
Saturday, August 10th, 2019ಮಂಗಳೂರು : ಶನಿವಾರ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಕನ್ಹಯ್ಯ ಕುಮಾರ್ ಭಾಗವಹಿಸಿದ್ದನ್ನು ವಿರೋಧಿಸಿ ಪ್ರತಿಭಟನೆಗೆ ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಹಿರಿಯ ಸ್ವಾತಂತ್ರ ಹೋರಾಟ, ಕರ್ನಾಟಕ ಏಕೀಕರಣ ಚಳವಳಿಯ ಧುರೀಣ ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಸಹೋದಯ ಸಭಾಂಗಣದಲ್ಲಿ ಇಂದಿನಿಂದ ಎರಡು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಭಾಷಣಕಾರರಾಗಿ ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಭಾಗವಹಿಸಿದ್ದಾರೆ. ಕನ್ಹಯ್ಯ ಕುಮಾರ್ […]