ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಲ್ಲಿದೆ ನೋಡಿ

Friday, July 30th, 2021
cbse-result

ಬೆಂಗಳೂರು  : ಸರಕಾರ  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಿದೆ. ಜುಲೈ 30ರಂದು ಮಧ್ಯಾಹ್ನ ಪ್ರಕಟಗೊಂಡಿರುವ CBSE 12ನೇ ತರಗತಿ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ ನೋಡಬಹುದು. ಅಲ್ಲದೇ ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶ ಪಡೆಯಬಹುದು. 2021ರ […]

ಕಟ್ಟಡ ಕಾರ್ಮಿಕರಿಗೆ ಸಹಾಯಧನ: ಮುಖ್ಯಮಂತ್ರಿಗಳಿಂದ ಚಾಲನೆ

Sunday, June 6th, 2021
Construction-workers

ಬೆಂಗಳೂರು: ಕೋವಿಡ್ – 19 ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸುವುದು ಅನಿವಾರ್ಯವಾಗಿತ್ತು. ಈ ನಿರ್ಬಂಧದಿಂದಾ ಉಂಟಾದ ಆರ್ಥಿಕ ಸಂಕಷ್ಟವನ್ನು ಪರಿಹರಿಸಲು ಪ್ಯಾಕೇಜ್ ಘೋಷಣೆ ಮಾಡಿರುವ ಸರ್ಕಾರ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಲಾದ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ಕೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇಂದು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು […]

ಅನ್ ಲಾಕ್ ಆದರೆ ಬಸ್ ಸಂಚಾರ

Thursday, June 3rd, 2021
vayuvyasarige

ಹುಬ್ಬಳ್ಳಿ: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿತ್ತು. ಅದರಂತೆ ಬಸ್ ಸೇವೆಗಳನ್ನು ಸಹ ಸ್ಥಗಿತಗೊಳಿಸಿತ್ತು. ಈಗ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಸರ್ಕಾರ ಅನ್ ಲಾಕ್ ಮಾಡುವ ನಿರ್ಧಾರಕ್ಕೆ ಬಂದರೆ. ಬಸ್‌ಗಳ ಚಾಲನೆಯನ್ನು ಮಾಡುವುದಾದರೆ ಈಗ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗ ಯಾವ ರೀತಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣ ವಿಭಾಗದ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಜೂನ್ 7 ರ ವರೆಗೆ […]

ಕೋವಿಡ್ ಎರಡನೇ ಅಲೆಗೆ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಬಲಿ, 10 ಲಕ್ಷ ರೂ. ಪರಿಹಾರ ನೀಡಿದ ಆಡಳಿತ ಮಂಡಳಿ

Thursday, May 13th, 2021
Basavaraj

ಚಿತ್ರದುರ್ಗ: ಕಳೆದ 5 ವರ್ಷಗಳಿಂದ  ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕೋಟಿ (43) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಎರಡನೇ ಅಲೆಗೆ ತುತ್ತಾಗಿ ಕಳೆದ ಹದಿನೈದು ದಿನಗಳಿಂದ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತ ಬಸವರಾಜ ಕೋಟಿ ಅವರಿಗೆ ಹತ್ತು ವರ್ಷದ ಓರ್ವ ಪುತ್ರ ಮತ್ತು ಹನ್ನೆರಡು ವರ್ಷದ ಖುಷಿ ಎಂಬ ಇಬ್ಬರು ಮಕ್ಕಳಿದ್ದರು, ಪತ್ನಿಯಾದ ಶಾಂತ ಸೇರಿದಂತೆ ಹೆತ್ತವರು ಹಾಗೂ ಅಪಾರ ಬಂಧಗಳನ್ನು ಅಗಲಿದ್ದಾರೆ. ಮೃತ ಬಸವರಾಜ್ […]