ಕೋವಿಡ್ 19 ಸೋಂಕಿನ ಮೂರನೇ ಅಲೆ ಅಪಾಯಕಾರಿ ಐಎಂಎ ಎಚ್ಚರಿಕೆ

Wednesday, May 19th, 2021
ima

ನವದೆಹಲಿ: ಕೋವಿಡ್ 19 ಸೋಂಕಿನ ಮೂರನೇ ಅಲೆ ಭಾರತದಲ್ಲಿ ಹರಡುವ ಸಾಧ್ಯತೆ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಬುಧವಾರ ಎಚ್ಚರಿಸಿದ್ದು, ಅಲೆಯನ್ನು ಎದುರಿಸುವುದು ಕಷ್ಟ ಎಂದಿದೆ. ಮಕ್ಕಳು, ವಯಸ್ಸಾದವರು ಎಚ್ಚರಿಕೆಯಿಂದಿರಬೇಕು. ಲಸಿಕೆ ತೆಗೆದುಕೊಳ್ಳವಿಕೆಯೊಂದೇ ದಾರಿಯಾಗಿದೆ ಎಂದು ಸಲಹೆ ನೀಡಿದೆ. ಕೋವಿಡ್ 3ನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಕೋವಿಡ್ ಲಸಿಕೆಯನ್ನು ನೀಡುವುದು ಉತ್ತಮ ಎಂದು ಐಎಂಎ ಸಲಹೆ ನೀಡಿದೆ. ಒಂದು ವೇಳೆ ನಾವು ಬೃಹತ್ ಪ್ರಮಾಣದಲ್ಲಿ ಲಸಿಕೆ ನೀಡಲು ಮುಂದಾಗದಿದ್ದರೆ, ಮೂರನೇ ಅಲೆಯನ್ನು ಎದುರಿಸುವುದು ಕಷ್ಟ ಮತ್ತು […]

ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ವೈದ್ಯರ ಪ್ರತಿಭಟನೆ

Saturday, December 12th, 2020
IMA

ಮಂಗಳೂರು: ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಆದೇಶಿಸಿರುವುದನ್ನು ಖಂಡಿಸಿ ನಗರದ ಐಎಂಎ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸಿದರು. ಅಲೋಪತಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದ್ಯರೂ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದೆ. ಇದನ್ನು ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದ್ದು, ಇದಕ್ಕೆ ಬೆಂಬಲ ಸೂಚಿಸಿದ ದ.ಕ ಜಿಲ್ಲೆಯ ವೈದ್ಯರು ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ‌. ವೈದ್ಯರು ಕಪ್ಪು ಪಟ್ಟಿ […]

ಐಎಂಎ ವಂಚನೆ ಪ್ರಕರಣ : ಜಾಮೀನು ಪಡೆದು ಹೊರ ಬಂದ ಆರೋಪಿಗೆ ಅದ್ಧೂರಿ ಸ್ವಾಗತ; ಸಾರ್ವಜನಿಕರಿಂದ ತೀವ್ರ ಟೀಕೆ

Wednesday, October 16th, 2019
muzaahiddin

ಬೆಂಗಳೂರು : ಐಎಂಎ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುಜಾಹಿದ್ದೀನ್ ಜಾಮೀನು ಪಡೆದು ಹೊರ ಬಂದ ಬಳಿಕ ಅದ್ಧೂರಿ ಸ್ವಾಗತ ದೊರೆತಿದೆ. ಮುಜಾಹಿದ್ದೀನ್ಗೆ ಸ್ವಾಗತ ಮಾಡುವ ವೇಳೆ ಬೆಂಬಲಿಗರು ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಬೆಂಬಲಿಗರು ಫ್ರೆಜರ್ ಟೌನ್ ನಲ್ಲಿ ಪಟಾಕಿ‌ ಸಿಡಿಸಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೈಕೋರ್ಟ್ ಏಕಸದಸ್ಯ ಪೀಠ ಮುಜಾಹಿದ್ದೀನ್ ಗೆ ಜಾಮೀನು ನೀಡಿತ್ತು. ಆತ ಅ.11ರಂದು ಜೈಲಿನಿಂದ ಬಿಡುಗಡೆಯಾಗಿದ್ದ. […]

ಐಎಂಎ ವಂಚನೆ ಪ್ರಕರಣ : ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶ

Tuesday, September 24th, 2019
IMA-Mansoon-khan

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮನ್ಸೂರ್‌ನನ್ನು ಸಿಟಿ ಸಿವಿಲ್ ಕೋರ್ಟ್‌ನ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ‌ ಹಾಜರು ಪಡಿಸಲಾಗಿತ್ತು. ಮನ್ಸೂರ್ ಖಾನ್ ಸಿಬಿಐ ವಿಚಾರಣೆ ಹೆಚ್ಚಿನ ಅವಶ್ಯಕತೆ ಇರದ ಹಿನ್ನೆಲೆ ಸೆ. 30 ರವರೆಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ […]