ಶಾಸಕ ಯು.ಟಿ.ಖಾದರ್ ಸಹೋದರ ಯು.ಟಿ. ಇಫ್ತಿಕಾರ್ ಮನೆಗೆ ಐಟಿ ದಾಳಿ

Thursday, February 18th, 2021
UT Ifthikar

ಮಂಗಳೂರು : ಆಸ್ಪತ್ರೆ ಮತ್ತು ಅದರ ಮಾಲಕರ ಮನೆಗೆ ದಾಳಿ ನಡೆಸಿದ ಮರುದಿನವೇ  ಶಾಸಕ ಯು.ಟಿ.ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಅಲಿ ಅವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ನಗರದ ಲೈಟ್‌ಹೌಸ್‌ನ ಅಪಾರ್ಟ್‌ಮೆಂಟ್ನಲ್ಲಿ ಇರುವ ಇಫ್ತಿಕಾರ್ ಅಲಿ  ಫ್ಲ್ಯಾಟ್‌ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರದಿಂದ ಐಟಿ ಅಧಿಕಾರಿಗಳು ಮಂಗಳೂರಿನ‌ ಉದ್ಯಮಿಗಳಿಗೆ ಸೇರಿದ ಸಂಸ್ಥೆಗಳ ಮೇಲೆ ಐಟಿ ದಾಳಿ ಮುಂದುವರಿಸಿದ್ದು, ಅದರ […]

ಮೈಸೂರು : ಐಟಿ ದಾಳಿ ವಿರುದ್ಧ ಎಚ್ ಡಿ ದೇವೇಗೌಡ ಗರಂ

Friday, October 11th, 2019
HD-Devegowda

ಮೈಸೂರು : ಬಿಜೆಪಿ ಪಕ್ಷದಲ್ಲಿ ಇರುವವರೆಲ್ಲರೂ ಪ್ರಾಮಾಣಿಕರಾ, ಬಿಜೆಪಿಯಲ್ಲಿ ಇರುವವರೆಲ್ಲಾ ಸತ್ಯವಂತರಾ, ಅವರಲ್ಲಿ ತಪ್ಪು ಮಾಡಿದವರೇ ಇಲ್ವಾ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರಶ್ನಿಸಿದರು. ನಗರದಲ್ಲಿ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ(ಐಟಿ), ಜಾರಿ ನಿರ್ದೇಶನಾಲಯ(ಇಡಿ), ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಲ್ಲಾ ತನಿಖಾ ಸಂಸ್ಥೆಗಳನ್ನು ಮೋದಿ ತಮ್ಮ ಹಿತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಎದುರಾಳಿಗಳ ಅಣಿಯಲ್ಲೂ ತನಿಖಾ ಸಂಸ್ಥೆಗಳ ಬಳಕೆ […]

ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳ ದಾಳಿ

Thursday, October 10th, 2019
RL-Jalappa

ಬೆಂಗಳೂರು : ಆರ್.ಎಲ್.ಜಾಲಪ್ಪ ಆಸ್ಪತ್ರೆ ಸಮೂಹದ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಸಮೂಹವಾಗಿರುವ ಆರ್‌.ಎಲ್.ಜಾಲಪ್ಪ ಆಸ್ಪತ್ರೆಯ ಮೇಲೆ ದಾಳಿ ನಡೆದಿದ್ದು, ದಾಖಲೆ ಪರಿಶೀಲನೆ ನಡೆಯುತ್ತಿದೆ. ಕೋಲಾರದ ಹೊರವಲಯದಲ್ಲಿರುವ ಆರ್.ಎಲ್.ಜಾಲಪ್ಪ ಆಸ್ಪತ್ರೆ, ಬೆಂಗಳೂರು ನಗರದಲ್ಲಿನ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆದಿದೆ. ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಗಳೂ ಸಾಕಷ್ಟಿದ್ದು ಅದರ ಮೇಲೂ ದಾಳಿ ನಡೆದಿರುವ ಮಾಹಿತಿ ಇದೆ. ದೊಡ್ಡಬಳ್ಳಾಪುರದಲ್ಲಿನ ಆರ್‌.ಎಲ್.ಜಾಲಪ್ಪ ಅವರ ಮಗ ರಾಜೇಂದ್ರ […]

‘ಪವರ್’ ಮಿನಿಸ್ಟರ್ ಮೇಲೆ ಐಟಿ ದಾಳಿ, ರಾಜ್ಯದಲ್ಲಿ ಕಾಂಗ್ರೆಸ್ ಪವರ್ ಕಟ್ ಆಗಲಿದೆಯೇ ?

Thursday, August 3rd, 2017
dk shivakumar

ಬೆಂಗಳೂರು  : ಡಿ.ಕೆ ಶಿವಕುಮಾರ್ ಅವರ ಮೇಲೆ ನಡೆದಿರುವ ಐಟಿ ದಾಳಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಉಂಟಾಗಿದೆ. ಇನ್ನೇನು ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿರುವಾಗ, ಅಧಿಕಾರದಲ್ಲಿರುವ ಒಬ್ಬ ಮಂತ್ರಿ ಮೇಲೆ ನಡೆದಿರುವ ಆದಾಯ ತೆರಿಗೆ ದಾಳಿಯಲ್ಲಿ ಆರೋಪ ಸಾಬೀತಾದರೆ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಹೊಡೆತ ಬೀಳಲಿದೆ. ಕರ್ನಾಟಕದ ಇಂಧನ ಸಚಿವ ಎನ್ನುವದಕ್ಕಿಂತ ಹೆಚ್ಚಾಗಿ ರಾಜ್ಯದ ಅತ್ಯಂತ ಪ್ರಭಾವಿ ಮುಖಂಡ ಡಿ ಕೆ ಶಿವಕುಮಾರ್ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯ ‘ವ್ಯವಸ್ಥಿತ’ ದಾಳಿ, ದ್ವೇಷದ ರಾಜಕಾರಣ […]