ಸುಳ್ಯ ಮೂಲದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ

Friday, October 27th, 2023
ಸುಳ್ಯ ಮೂಲದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ : ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿ ಕನಕಮಜಲಿನ ಕಾಪಿಲ ನಿವಾಸಿ ಗಿರಿಯಪ್ಪ ಗೌಡರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರ ಪತ್ನಿ ಐಶ್ವರ್ಯ(26) ಆತ್ಮಹತ್ಯೆಗೆ ಶರಣಾದವರು. ಸುಳ್ಯ ಮೂಲದ ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್ ಅವರನ್ನು ಮದುವೆಯಾಗಿದ್ದರು. ಐಶ್ವರ್ಯರವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ದುಡಿಯುತ್ತಿದ್ದರು. ಪತಿ ರಾಜೇಶ್ ಸ್ವಂತ ಐಸ್ ಕ್ರೀಮ್ ಪಾರ್ಲರ್ […]

ಡಿ.ಕೆ. ಶಿವಕುಮಾರ್‌ ಪುತ್ರಿ ನಿಶ್ಚಿತಾರ್ಥ ಎಸ್‌.ಎಂ.ಕೃಷ್ಣ ಅವರ ಅಳಿಯನ ಜೊತೆ ನೆರವೇರಿತು

Thursday, November 19th, 2020
Amartya

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥವು ನವೆಂಬರ್ 19ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್‍ವೊಂದರಲ್ಲಿ ನೆರವೇರಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ […]

ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟು ಹೋದ ಮಕ್ಕಳು..ಪೋಷಕರಿಂದ ಹುಡುಕಾಟ!

Monday, November 5th, 2018
childrens

ಮೈಸೂರು: ಮನೆಯಲ್ಲಿದ್ದ 100 ರೂಪಾಯಿಯನ್ನು ಖರ್ಚು ಮಾಡಿದ್ದಕ್ಕೆ ತಂದೆ ತಾಯಿ ಬುದ್ಧಿ ಹೇಳಿದ ಕಾರಣ, ಇಬ್ಬರು ಮಕ್ಕಳು ಮನೆ ಬಿಟ್ಟು ಹೋದ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಎನ್.ಆರ್.ಮೊಹಲ್ಲಾದಲ್ಲಿ ವಾಸವಾಗಿರುವ ನಾಗರಾಜು ಮತ್ತು ಸೌಮ್ಯ ದಂಪತಿಯ ಮಕ್ಕಳಾದ ಐಶ್ವರ್ಯ(14) ಹಾಗೂ ನಕುಲ್(12) ಬುದ್ದಿ ಹೇಳಿದ್ದಕ್ಕೆ ಬೇಸರಗೊಂಡು ಮನೆಬಿಟ್ಟು ಹೋದ ಮಕ್ಕಳು. ಅಕ್ಟೋಬರ್ 28ರಂದು ಮಕ್ಕಳು ಮನೆಯಲ್ಲಿದ್ದ 100 ರೂಪಾಯಿಯನ್ನು ಖರ್ಚು ಮಾಡಿದ್ದಾರೆ. ಇದಕ್ಕೆ ಮನೆಯಲ್ಲಿ ಹೀಗೇ ಮಾಡಬೇಡಿ ಎಂದು ತಂದೆತಾಯಿ ಬುದ್ಧಿ ಹೇಳಿದ್ದಾರೆ. ತಂದೆ ತಾಯಿಯ ಈ […]

ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಕೊಲ್ಲುರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ..!

Tuesday, October 2nd, 2018
shivkumar

ಕುಂದಾಪುರ: ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಕೊಲ್ಲುರು ಶ್ರೀ ಮೂಕಾಂಬಿಕೆ ದರ್ಶನ ಪಡೆಯುವ ಮೂಲಕ ಸಚಿವ ಡಿ.ಕೆ. ಶಿವಕುಮಾರ್ ಕೊಲ್ಲೂರು ಕ್ಷೇತ್ರದ ಬಗ್ಗೆ ತನಗಿರುವ ನಂಬಿಕೆ ಹಾಗೂ ಭಕ್ತಿ ಪ್ರದರ್ಶಿಸಿದ್ದಾರೆ. ಇಂದು (ಮಂಗಳವಾರ) ಮಧ್ಯಾಹ್ನದ ಸುಮಾರಿಗೆ ಪತ್ನಿ ಉಷಾ, ಪುತ್ರಿ ಐಶ್ವರ್ಯ ಜೊತೆ ಕೊಲ್ಲೂರಿಗೆ ಆಗಮಿಸಿದ ಅವರು ದೇವಿ ದರ್ಶನ ಪಡೆದು ವಿಶೇಶ ಪೂಜೆ ಸಲ್ಲಿಸಿದರು. ದೇವಳಕ್ಕೆ ಹೊರತುಪಡಿಸಿ ಬೇರ್‍ಯಾರಿಗೂ ಕೂಡ ಪೂರ್ವ ಮಾಹಿತಿ ನೀಡಿರಲಿಲ್ಲ. ಮಾಧ್ಯಮಕ್ಕೂ ಕೂಡ ಯಾವುದೇ ಮಾಹಿತಿ ಇರಲಿಲ್ಲ. ಸದ್ಯ ಸಚಿವ […]

ಬೆಂಗಳೂರಿನಲ್ಲಿದ್ದುಕೊಂಡೇ ದೇಶ ಆಳುತ್ತಾರಂತೆ ಹುಚ್ಚ ವೆಂಕಟ್‌‌!

Thursday, March 29th, 2018
huccha-venkat

ಮಂಗಳೂರು: ನನ್ನನ್ನು ಹೀರೋ ಮಾಡಿದ್ದು ನ್ಯೂಸ್ ಚಾನೆಲ್‌ಗಳು. ನ್ಯೂಸ್ ಚಾನೆಲ್‌ಗಳ ಸಹಿತ ಪತ್ರಕರ್ತರು ಪ್ರಾಣ ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ. ನಾನೂ ನ್ಯೂಸ್ ಚಾನೆಲ್ ಆ್ಯಂಕರ್ ಆಗಿ ನಟಿಸುತ್ತಿದ್ದೇನೆ. ನನ್ನ ಸಿನಿಮಾ `ಡಿಕ್ಟೇಟರ್ ಹುಚ್ಚ ವೆಂಕಟ್’ ಸಿದ್ಧಗೊಳ್ಳುತ್ತಿದ್ದು, ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಅಡ್ಡಿಪಡಿಸಿದರೆ, ದೃಶ್ಯಗಳಿಗೆ ಕತ್ತರಿ ಪ್ರಯೋಗ ನಡೆಸಿದರೆ ಯೂಟ್ಯೂಬ್‌ನಲ್ಲಿ ಪೂರ್ಣ ಪ್ರಮಾಣದ ಸಿನಿಮಾ ಹರಿಯಬಿಡುತ್ತೇನೆ ಎಂದು ಸಿನಿಮಾ ನಿರ್ದೇಶಕ, ನಿರ್ಮಾಪಕ ಹುಚ್ಚ ವೆಂಕಟ್ ಹೇಳಿದರು. ಐಶ್ವರ್ಯ ಅವರು ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಮಡಿಕೇರಿ, ಭಾಗಮಂಡಲ, ತಲಕಾವೇರಿಯಲ್ಲಿ […]

ಬೆಂಗಳೂರಿಗೆ ಹೋಗಿದ್ದ ಯುವತಿಯೋರ್ವಳು ಮಗುವಿನ ಸಮೇತ ಪತ್ತೆ

Thursday, October 20th, 2016
Missing-mangaluru-lady

ಮಂಗಳೂರು: ಕೆಲಸ ಸಿಕ್ಕಿದೆ ಎಂದು ಬೆಂಗಳೂರಿಗೆ ಹೋಗಿದ್ದ ಯುವತಿಯೋರ್ವಳು ಬಳಿಕ ಮಗುವಿನ ಸಮೇತ ಪತ್ತೆಯಾಗಿರುವ ಪ್ರಸಂಗ ನಗರದ ಜನತೆಯಲ್ಲಿ ಆಶ್ಚರ್ಯ ಮೂಡಿಸಿದೆ. ನಗರದ ಬೆಸೆಂಟ್‌ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಬೊಕ್ಕಪಟ್ನ ನಿವಾಸಿ ಐಶ್ವರ್ಯ ಶೆಟ್ಟಿ ಮೂರು ತಿಂಗಳ ಹಿಂದೆ ಉದ್ಯೋಗ ದೊರೆತಿರುವುದಾಗಿ ಹೇಳಿ ಬೆಂಗಳೂರಿಗೆ ತೆರಳಿದ್ದಳು. ಬೆಂಗಳೂರಿಗೆ ತೆರಳಿದ್ದ ಕೆಲ ದಿನಗಳವರೆಗೆ ತಾಯಿ ಜೊತೆ ನಿರಂತರ ಸಂಪರ್ಕದಲ್ಲಿದ್ದ ಐಶ್ವರ್ಯ ಕೆಲ ದಿನಗಳ ನಂತರ ತಾಯಿ ಜೊತೆ ಮಾತುಕತೆ ನಿಲ್ಲಿಸಲು ಪ್ರಯತ್ನಿಸಿದ್ದಳಂತೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಊರಿಗೆ […]