ಯಕ್ಷಗಾನ ಕಲಾವಿದ ಬೈಕ್ ಅಪಘಾತದಲ್ಲಿ ಮೃತ್ಯು

Thursday, January 20th, 2022
Vamana Devadiga

ಮೂಡುಬಿದಿರೆ: ಓಮ್ನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿರಿಯಡ್ಕ ಮೇಳದ ಯಕ್ಷಗಾನ ಕಲಾವಿದ ಮೃತಪಟ್ಟಿದ್ದಾರೆ. ಗೋಳಿತ್ಯಾರು ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ವಾಮನ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಡಗು ತಿಟ್ಟಿನ ಯಕ್ಷಗಾನ ಮೇಳ  (ಹಿರಿಯಡ್ಕ ಮೇಳ)ದಲ್ಲಿ ಹಾಗೂ ಚಿಕ್ಕಮೇಳದಲ್ಲಿ ಯಕ್ಷ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ‌ ಎಂಬಲ್ಲಿ ಯಕ್ಷಗಾನ ಮುಗಿಸಿ ಬೈಕ್ನಲ್ಲಿ ಬರುವಾಗ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ  ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.    

ಓಮ್ನಿ ಕಾರು ಡಿಕ್ಕಿ ಹೊಡೆದು ಇಬ್ಬರು ಒಣ ಮೀನು ವ್ಯಾಪಾರಿಗಳು ಮೃತ್ಯು

Friday, May 28th, 2021
omni car accident

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಓಮ್ನಿ ಕಾರು ನಿಂತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ  ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು. ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ […]

ಬಂಟ್ವಾಳ : ಗೋವು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Saturday, December 14th, 2019
bantwal

ಬಂಟ್ವಾಳ : ಜಾನುವಾರುಗಳ ಕಳವು ಪ್ರಕರಣದ ಆರೋಪದ ಮೇರೆಗೆ ಪೊಲೀಸರು ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ನಿವಾಸಿ ನಜಾದುದ್ದೀನ್ ಹಾಗೂ ಅರ್ಕುಳ ಗ್ರಾಮದ ಅಬ್ದುಲ್ ಸಲಾಂ ಬಂಧಿತ ಆರೋಪಿಗಳು. ನವೆಂಬರ್ 28ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪನಡುವಿನಲ್ಲಿ ಸಜೀಪದಿಂದ ಕಂಚಿನಡ್ಕಕ್ಕೆ ತೆರಳುವ ರಸ್ತೆಯಲ್ಲಿ ದನಗಳ ಕಳವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು […]

ಓಮ್ನಿ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು

Wednesday, January 17th, 2018
nithin

ಕುಂದಾಪುರ: ಓಮ್ನಿ ಕಾರು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಯೊಬ್ಬರು ಮೃತಪಟ್ಟ ಘಟನೆ ಜ.15ರಂದು ರಾತ್ರಿ ವೇಳೆ ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯ ಬಸ್ರೂರು ಎಂಬಲ್ಲಿ ನಡೆದಿದೆ. ಮೃತರನ್ನು ಬೆಟ್ಟಾಗರ ನಿವಾಸಿ ಸಂಜೀವ ಪೂಜಾರಿ ಹಾಗೂ ರೇವತಿ ದಂಪತಿ ಪುತ್ರ ನಿತಿನ್ ಪೂಜಾರಿ(19) ಎಂದು ಗುರುತಿಸಲಾಗಿದೆ. ಬಸ್ರೂರು ರಸ್ತೆಯಲ್ಲಿ ಬಸ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಅಪಘಾತದ ಶಬ್ದ ಕೇಳಿ ಮನೆಯಲ್ಲಿ ಮಲಗಿದ್ದ ನಿತಿನ್ ಹಾಗೂ ನೆರಮನೆಯ ಅನಿಲ್ ಎಂಬವರು ಕೂಡಲೇ ನೆರವಿಗೆ ದಾವಿಸಿದರು. ಆಗ ಕುಂದಾಪುರದಿಂದ […]

ಸ್ಟೇಟ್ ಬ್ಯಾಂಕ್ ಬಳಿ ಓಮ್ನಿ ಕಾರಿಗೆ ಸಾರ್ಟ್ ಸರ್ಕ್ಯೂಟ್ ; ತಪ್ಪಿದ ಅನಾಹುತ

Wednesday, September 25th, 2013
Car-fair

ಮಂಗಳೂರು : ನಗರದ ಸ್ಟೇಟ್ ಬ್ಯಾಂಕ್  ಬಳಿ ಇರುವ ಹ್ಯಾಮಿಲ್ಟನ್ ಕಟ್ಟಡದ ಮುಂಬಾಗದಲ್ಲಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಸಾರ್ಟ್ ಮಾಡುವಾಗ ಸಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡ ಘಟನೆ ಮಂಗಳವಾರ ಸಂಜೆ 3.30ಕ್ಕೆ ನಡೆದಿದೆ. KA 19 N 9475 ನಂಬರಿನ ಓಮ್ನಿ ಕಾರಿನಲ್ಲಿ ಕಾರಿನ ಮಾಲಿಕ ಮಹಮ್ಮದ್ ಪೈಗಂಬರ್ ರವರು ಕಂಕನಾಡಿಯಿಂದ ಮಂಗಳೂರಿನ ಹ್ಯಾಮಿಲ್ಟನ್ ಕಟ್ಟಡದ ವಕೀಲರಲ್ಲಿಗೆ ನೋಟರಿಗಾಗಿ ಬಂದಿದ್ದರು ಕಾರಿನ ಎಲ್ ಪಿಜಿ ಮುಗಿಯುವ ಹಂತದಲ್ಲಿದ್ದುದರಿಂದ ಮೂರು ಲೀಟರ್ ಪೆಟ್ರೋಲ್ ತುಂಬಿಸಿದ್ದರು. ನೋಟರಿ ಮುಗಿಸಿ ವಾಪಾಸಾಗುವಾಗ ಅವರ […]