ಕಾರಿನಲ್ಲಿ 44 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆ

Friday, November 12th, 2021
dead Body

ಮಂಗಳೂರು : ಪಾರ್ಕ್ ಮಾಡಿದ್ದ ಕಾರಿನಲ್ಲಿ 44 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ನವೆಂಬರ್ 12ರ ಶುಕ್ರವಾರ ಪತ್ತೆಯಾಗಿದೆ.. ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ ಗುರುವಾರ ರಾತ್ರಿಯಿಂದಲೇ ಕಾರು ನಗರದ ಕಂಕನಾಡಿ ಬಳಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು ,ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು […]

ಕಂಕನಾಡಿ ಬಲ್ಲಾಳ್‌ಗುಡ್ಡೆ ಪ್ರದೇಶದಲ್ಲಿ ಚಿರತೆ, 25ಕ್ಕೂ ಅಧಿಕ ಬೀದಿ ನಾಯಿಗಳು ನಾಪತ್ತೆ

Monday, October 4th, 2021
Chita

ಮಂಗಳೂರು:  ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಕಂಕನಾಡಿ ಬಲ್ಲಾಳ್‌ಗುಡ್ಡೆ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸ್ಥಳೀಯರು ಕೂಡಲೇ ಕಾರ್ಪೊರೇಟರ್‌ ಕೇಶವ್‌ ಮರೋಳಿ ಅವರ ಮೂಲಕ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್‌ ಪೈ ನೇತೃತ್ವದ ತಂಡ ಆಗಮಿಸಿ ಶೋಧ ನಡೆಸಿದೆ. ಕಂಕನಾಡಿಯ ಕನಪದವು, ಮಾರ್ತ ಕಾಂಪೌಂಡ್‌, ಬಲ್ಲಾಳ್‌ಗುಡ್ಡೆ ವ್ಯಾಪ್ತಿಯಲ್ಲಿಅರಣ್ಯಾಧಿಕಾರಿಗಳು ಶೋಧ ನಡೆಸಿದಾಗ ನಾಲ್ಕು ಕಡೆಗಳಲ್ಲಿ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಆ ಗುರುತನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ. ಕಂಕನಾಡಿ ವ್ಯಾಪ್ತಿಯ ಎರಡು ಕಡೆ […]

ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವತಿಯರು ನಾಪತ್ತೆ

Tuesday, October 27th, 2020
Lakshmi-Reshma

ಮಂಗಳೂರು : ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದ ಇಬ್ಬರು ಯುವತಿಯರು ನಾಪತ್ತೆಯಾದ ಬಗ್ಗೆ ದೂರು  ದಾಖಲಾಗಿದೆ. ಕಣ್ಣೂರು ನಿವಾಸಿ ಲಕ್ಷ್ಮೀಬಾಯಿ (19), ಶಕ್ತಿ ನಗರದ ರೇಷ್ಮಾ ಡಿಸೋಜ (38) ನಾಪತ್ತೆಯಾದವರು. ಲಕ್ಷ್ಮೀಬಾಯಿ ಅ.18ರಂದು ಕಣ್ಣೂರು ಗ್ರಾಮದ ಬಾಡಿಗೆ ಮನೆಯಿಂದ ಕೆಲಸಕ್ಕೆಂದು ಹೋದವಳು ಮನೆಗೆ ವಾಪಸಾಗದೆ ಕಾಣೆಯಾಗಿದ್ದಾರೆ. ಲಕ್ಷ್ಮೀಬಾಯಿ ಎತ್ತರ- 5.5 ಅಡಿ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ. ಬಿಳಿ ಟಾಪ್, ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಶಾಲು ಧರಿಸಿರುತ್ತಾಳೆ. […]

ಕಂಕನಾಡಿ ಬಾರ್&ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಹೆಣ

Thursday, August 20th, 2020
bar

ಮಂಗಳೂರು : ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ, ಪ್ರಾಯ: ಸುಮಾರು 53 ವರ್ಷ. […]

ಇಂಡಿಯಾನ ಆಸ್ಪತ್ರೆಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆ

Tuesday, August 18th, 2020
poornima

ಮಂಗಳೂರು :  ಪಂಪ್‍ವೆಲ್ ಇಂಡಿಯಾನ ಆಸ್ಪತ್ರೆಗೆ ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ  ಆಗಸ್ಟ್ 13 ರಿಂದ ಕಾಣೆಯಾಗಿದ್ದಾರೆ. ಪೂರ್ಣಿಮಾ (35) ಎಂಬ ಯುವತಿ ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:- ಹೆಸರು- ಪೂರ್ಣಿಮಾ, ಪ್ರಾಯ – 35 ವರ್ಷ, ಎತ್ತರ-5 ಅಡಿ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ, ಎದುರಿನ ಹಲ್ಲು ಹೊರಬಂದಂತೆ ಕಾಣುತ್ತದೆ. ಧರಸಿದ ಬಟ್ಟೆ-ನೀಲಿ ಬಣ್ಣದ ಟಾಪ್ ಹಾಗೂ ಜೀನ್ಸ್ ಪ್ಯಾಂಟ್ ಶರ್ಟ್, […]

ಅಕ್ರಮ ಮರಳು ಸಾಗಾಟದ ವಿರುದ್ಧ ಭಾರಿ ಕಾರ್ಯಾಚರಣೆ

Wednesday, November 27th, 2019
Lorry

ಮಂಗಳೂರು : ಕೇರಳ ರಾಜ್ಯ ಸೇರಿದಂತೆ ವಿವಿಧೆಡೆಗೆ ಅಕ್ರಮವಾಗಿ ಮರಳು ಸಾಗಾಟದ ವಿರುದ್ದ ದಕ್ಷಿಣ ಉಪವಿಭಾಗ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ 8 ಪ್ರಕರಣವನ್ನ ದಾಖಲಿಸಿದ್ದಾರೆ. ನ. 21 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಉಪನಿರೀಕ್ಷಕಿ ಜಾನಕಿ ಕೆ. ಅವರು ಸಿಬ್ಬಂದಿಯೊಂದಿಗೆ ಆಡಂಕುದ್ರು ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಟಿಪ್ಪರ್ ಲಾರಿಯೊಂದನ್ನು ತಡೆದರು. ಆಗ ಚಾಲಕ ಲಾರಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಅದನ್ನು ಪರಿಶೀಲನೆ ನಡೆಸಿದಾಗ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಮರಳು […]

ಪುತ್ತೂರು : ಕೈಯಲ್ಲಿ ತಲ್ವಾರ್​ ಹಿಡಿದು ರೋಡ​ಲ್ಲಿ ದರ್ಬಾರ್ ನಡೆಸಿದ ಮಾನಸಿಕ ಅಸ್ವಸ್ಥ

Wednesday, September 25th, 2019
avinash

ಕಾಣಿಯೂರು : ಇಲ್ಲಿನ ಪುಣ್ಚತ್ತಾರು ಪೇಟೆಯಲ್ಲಿ ಮಾನಸಿಕ ಅಸ್ಪಸ್ಥರೋರ್ವರು ತಲವಾರು ಝಳಪಿಸಿದ ಘಟನೆ ನಡೆದಿದೆ. ದಾರಿಯುದ್ದಕ್ಕೂ ತಲ್ವಾರ್ ಬೀಸಿ ಜನರರಿಗೆ ಭಯಹುಟ್ಟಿಸಿದ ಯುವಕನನ್ನು ಮಾನಸಿಕ ಅಸ್ವಸ್ಥ ಅವಿನಾಶ್ ಎಂದು ಗುರುತಿಸಲಾಗಿದೆ. ಈ ವೀಡಿಯೋ ಇದೀಗ ವೈರಲ್ ಆಗಿದೆ. ಈ ಕುರಿತು ಸ್ಥಳೀಯರು ಬೆಳ್ಳಾರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ತಲ್ವಾರ್ ಬೀಸುತ್ತಿದ್ದರೂ ಆತನನ್ನು ಹಿಡಿಯದೆ ಯುವಕನನ್ನು ಕಾರಿನಲ್ಲೇ ಕುಳಿತು ಹಿಂಬಳಿಸಿದ ಕಾರ್ಯ ವೈಖರಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ಪೊಲೀಸರು ತಲವಾರು ಝಳಪಿಸಿದ […]

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪ ಸಾಬೀತು..ಇಂದು ಶಿಕ್ಷೆ ಪ್ರಮಾಣ ಪ್ರಕಟ

Saturday, December 15th, 2018
atttempt

ಮಂಗಳೂರು: ನಾಲ್ಕು ವರ್ಷದ ಬಾಲಕಿ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಮೇಲಿನ‌ ಆರೋಪ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೊಕ್ಸೋ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕಂಕನಾಡಿ ನಿವಾಸಿ ಚಂದ್ರಶೇಖರ್ ಅಲಿಯಾಸ್ ರಾಜೇಶ್ (49) ಅಪರಾಧಿ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ಈತನಿಗೆ ವಿವಾಹವಾಗಿ ಮಕ್ಕಳೂ ಇವೆ. ಈ ಹಿಂದೆ ಅಸೈಗೋಳಿ ಸಮೀಪದ ಗ್ರಾಮವೊಂದರಲ್ಲಿ ಈತ ವಾಸವಾಗಿದ್ದ ಸಂದರ್ಭ ಸಂತ್ರಸ್ತ ಬಾಲಕಿಯ ಮನೆಯವವರು ಪಕ್ಕದ ಮನೆಯಲ್ಲಿದ್ದರು. […]

ಗಾಂಜಾ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Monday, July 23rd, 2018
ganja-case

ಮಂಗಳೂರು: ಗಾಂಜಾ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿವೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬೋಂದೆಲ್ನ ಪಚ್ಚನಾಡಿ ಗ್ರಾಮದ ಸಾರಕೋಡಿಯ ಗೌರವ್ ಕೋಟ್ಯಾನ್ (25) ಬಂಧಿತ ಆರೋಪಿ. ಈತನ ವಿರುದ್ಧ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿತ್ತು. ಆರೋಪಿ ತಲೆಮರೆಸಿಕೊಂಡಿದ್ದರಿಂದ ಆತನ ಶೋಧ ಕಾರ್ಯವನ್ನು ಪೊಲೀಸರು ನಡೆಸುತ್ತಿದ್ದರು. ಸಿಸಿಬಿ ಇನ್ಸ್ಪೆಕ್ಟರ್ ಶಾಂತಾರಾಮ ಅವರ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಆರೋಪಿಯು ಈ ಹಿಂದೆ ಮಂಗಳೂರು ದಕ್ಷಿಣ […]

ಕಂಕನಾಡಿ ವೃತ್ತದಿಂದ ಪಂಪುವೆಲ್ ರಸ್ತೆಯವರೆಗೆ ಸ್ವಚ್ಛತಾ ಅಭಿಯಾನ

Saturday, July 21st, 2018
swaccha-bharat

ಮಂಗಳೂರು:ನಗರದ ಕಂಕನಾಡಿ ಕರಾವಳಿ ವೃತ್ತದಿಂದ ಪಂಪುವೆಲ್ ರಸ್ತೆಯವರೆಗೆ ಸ್ವಚ್ಛತಾ ಅಭಿಯಾನವನ್ನು ಯೂಥ್ ಬಂಟ್ಸ್ ನೇತೃತ್ವದಲ್ಲಿ ನಡೆಯಿತು.ಯೂಥ್ ಬಂಟ್ಸ್ ದಕ್ಷಿಣ ಕನ್ನಡ ಆಯೋಜಿಸಿದ್ದ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ಕಂಕನಾಡಿ ಕರಾವಳಿ ವೃತ್ತದಿಂದ ಪಂಪವೆಲ್ ರಸ್ತೆಯವರೆಗಿನ ರಸ್ತೆಯ ಗುಂಡಿಗಳನ್ನು ಮುಚ್ಚಿ ,ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ,ಜಯಂಬಿಕಾ ಚೀಟ್ಸ್ ನ ನಿರ್ದೇಶಕರಾದ ಶ್ರೀ ಸುರೇಶ ರೈ, ಜಪ್ಪು ಬಂಟರ ಸಂಘದ ಅಧ್ಯಕ್ಷ ಶ್ರೀ ಸುನಿಲ್ ಶೆಟ್ಟಿ, ಖ್ಯಾತ ನಿರ್ದೇಶಕ ಶ್ರೀ ಸುಕೇಶ್ […]