ಕೊರೊನಾ ಪಾಸಿಟಿವ್ ಇದ್ದ ಯುವಕ ಕಟ್ಟಡದಿಂದ ಹಾರಿ ಆತ್ಮಹತ್ಯೆ

Saturday, May 29th, 2021
Jumping

ಮಂಗಳೂರು : ಕೊರೊನಾ ಪಾಸಿಟಿವ್ ಇದ್ದ ಯುವಕನೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪಡೀಲ್ ಬಳಿ ಮೇ 27 ರ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಸಮೀರ್ (30)ಎಂದು ಗುರುತಿಸಲಾಗಿದೆ. ಪಡೀಲ್ ನ 7 ನೇ ಮಹಡಿಯ ಫ್ಲ್ಯಾಟ್ ನಿಂದ ಸಮೀರ್ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸಮೀರ್ ಅವಿವಾಹಿತರಾಗಿದ್ದು, ಮೃತದೇಹ ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದುಬಂದಿದೆ. ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಿಂಡಿಕೇಟ್ ಸರ್ಕಲ್ ಬಳಿ ಎಂಟು ಅಂತಸ್ತಿನ ಕಟ್ಟಡ ಕುಸಿಯುವ ಭೀತಿಯಲ್ಲಿ

Monday, September 21st, 2020
Manipal Building

ಉಡುಪಿ  : ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಎಂಟು ಅಂತಸ್ತಿನ ಕಟ್ಟಡದ ತಡೆಗೋಡೆ ಕುಸಿಯುತ್ತಿದ್ದು ಕಟ್ಟಡ ಕುಸಿಯುವ ಹಂತದಲ್ಲಿದೆ. ಎಸಿ, ಪೌರಾಯುಕ್ತ, ತಹಶಿಲ್ದಾರ್, ಜಿ.ಪಂ ಅಧ್ಯಕ್ಷರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ  ಕಟ್ಟಡದ ತಡೆಗೋಡೆ ಕುಸಿದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಕಟ್ಟದಲ್ಲಿರುವ ಜನರನ್ನು ಸ್ಥಳಾಂತರಿಸುವ ಕೆಲಸ ನೆಡೆಯುತ್ತಿದೆ ಸದ್ಯ ಕಟ್ಟಡದ ತಳಭಾಗದಲ್ಲಿ ಮೂರು ಅಂಗಡಿಗಳಿದ್ದು ಅವುಗಳನ್ನು ಮುಚ್ಚಲಾಗಿದೆ. ಉಡುಪಿಯಿಂದ ಮಣಿಪಾಲಕ್ಕೆ ಬರುವ ವಾಹನ ಸಂಚಾರದ ರಸ್ತೆಯನ್ನು […]

ಸುಳ್ಯ : ಕಟ್ಟಡದಿಂದ ಬಿದ್ದು ಮೇಸ್ತ್ರಿ ಮೃತ್ಯು

Friday, August 9th, 2019
Ali

ಮಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಕಟ್ಟಡದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಹಾಸನ ಮೂಲದ ಪಳ್ಳಿಮಜಲು ನಿವಾಸಿ ಅಲಿ ಮೃತಪಟ್ಟ ದುರ್ದೈವಿ. ಮೇಸ್ತ್ರಿ ಕೆಲಸದ ಗುತ್ತಿಗೆ ನಿರ್ವಹಿಸುತ್ತಿದ್ದ ಅಲಿ ಕೆಲಸ ಮಾಡುತ್ತಿದ್ದ ವೇಳೆಗೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ‌. ಪರಿಣಾಮ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟುಬಿದ್ದಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ