ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಇರಲಿ : ಬಸವರಾಜ ಬೊಮ್ಮಾಯಿ ಕರೆ

Monday, November 1st, 2021
Kannada Rajyotsava Bommai

ಬೆಂಗಳೂರು : ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಕನ್ನಡಿಗರಿಗಿರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಮೈಸೂರು ಬ್ಯಾಂಕ್ ಬಳಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಉತ್ಸವ ಹಾಗೂ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡವನ್ನು ಬೆಳೆಸಿ ಕರ್ನಾಟಕವನ್ನು ಉಳಿಸಬೇಕು. ಕನ್ನಡಿಗರು ಈ ಕೆಲಸ ಮಾಡಬೇಕು. ಕನ್ನಡ ಬಳಕೆ, ಇತರರಿಗೆ ಕಲಿಸುವುದು, ಸಾಹಿತ್ಯ, ಸಂಸ್ಕೃತಿಯಲ್ಲಿ ನಿರಂತರವಾಗಿ ಬೆಳೆಸಲು ಪರಿಶ್ರಮ ಅಗತ್ಯ. ಕನ್ನಡಕ್ಕೆ ಆಡಳಿತದಲ್ಲಿ ಹಾಗೂ ಬದುಕಿನಲ್ಲಿ ಅಗ್ರಮಾನ್ಯ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳು […]