ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ವೀರ ಯೋಧರ ಸ್ಮಾರಕಗಳಿಗೆ ಗೌರವ

Wednesday, July 27th, 2016
kargil-vijay-divas

ಮಂಗಳೂರು: ಕಾರ್ಗಿಲ್ ವಿಜಯೋತ್ಸವ ದಿನದ ನಿಮಿತ್ತ ಮಂಗಳವಾರ ಸಂಜೆ ಇಲ್ಲಿಯ ಕದ್ರಿಗುಡ್ಡೆಯಲ್ಲಿರುವ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ಸ್ಮಾರಕಗಳಿಗೆ ಪುಷ್ಪಾರ್ಚನೆ ಹಾಗೂ ಮೊಂಬತ್ತಿ ದೀಪ ಬೆಳಗಿಸಿ ಗೌರವ ಸಲ್ಲಿಸಲಾಯಿತು. ದ. ಕ. ಜಿಲ್ಲಾ ಮಾಜಿ ಸೈನಿಕರ ಸಂಘ, ಶಾಸ್ತಾವು ಭೂತನಾಥೇಶ್ವರ ಪ್ರತಿಷ್ಠಾನ, ಲಯನ್ಸ್ ಕ್ಲಬ್ ಮತ್ತು ಸಮಗ್ರ ಕಲಿಕಾ ಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ಮಡಿದ ಯೋಧರಿಗೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಕ್ರಮ್ ದತ್ತ, ಪದಾಧಿಕಾರಿಗಳಾದ […]

ಅನಂತಪದ್ಮನಾಭ ಉಪಾಧ್ಯಾಯ ಸಂಸ್ಮರಣಾ ಸಮಾರಂಭ

Friday, February 5th, 2016
Kollangana

ಬದಿಯಡ್ಕ: ಬ್ರಹ್ಮಶ್ರೀ ತಂತ್ರ ವಿದ್ಯಾತಿಲಕ ತಂತ್ರಿ ಅನಂತಪದ್ಮನಾಭ ಉಪಾಧ್ಯಾಯ ಕೊಲ್ಲಂಗಾನ ಅವರ ೧೨ನೇ ಸಂಸ್ಮರಣಾ ಸಮಾರಂಭವು ಮಂಗಳವಾರ ರಾತ್ರಿ ನೀರ್ಚಾಲು ಬಳಿಯ ಕೊಲ್ಲಂಗಾನ ಶ್ರೀನಿಲಯದಲ್ಲಿ ಜರಗಿತು. ಯಕ್ಷಗಾನ ಕಲಾವಿದ ರವಿ ಅಲೆವೂರಾಯ ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಂತ್ರಿವರ್ಯ ಬ್ರಹ್ಮಶ್ರೀ ಗಣಾಧಿರಾಜ ಉಪಾಧ್ಯಾಯ ಕೊಲ್ಲಂಗಾನ ಸಹಿತ ಹಲವಾರು ಮಂದಿ ಪ್ರಮುಖರು ಭಾಗವಹಿಸಿದ್ದರು. ಇದೇ ವೇಳೆ ಬ್ರಹ್ಮಶ್ರೀ ವೇದಮೂರ್ತಿ ಚಂದ್ರಶೇಖರ ಭಟ್ ಕುರೋಮೂಲೆ ಕರೋಪಾಡಿ ಅವರನ್ನು ಗೌರವಿಸಲಾಯಿತು.