ಕನಕದಾಸರ ಚಿಂತನೆಗಳು ಇಂದಿಗೆ ಪ್ರಸ್ತುತ : ಎಂ.ಆರ್.ಸತ್ಯನಾರಾಯಣ

Friday, October 8th, 2021
Satyaanarayana

ಮಂಗಳೂರು: ಕನಕದಾಸರ ಸಾಮಾಜಿಕ ಮತ್ತು ಅಧ್ಯಾತ್ಮಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಕೀರ್ತನೆಯ ಮೂಲಕ ಕನಕದಾಸರನ್ನು ಜನರ ಬಳಿ ತಲುಪಿಸುವ ಕಾರ್ಯ ಆಗಬೇಕು, ಎಂದು ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಮನ್ವಯಾಧಿಕಾರಿ, ಗಮಕಿ ಎಂ.ಆರ್. ಸತ್ಯನಾರಾಯಣ ಅವರು ಹೇಳಿದರು. ಅವರು ಶುಕ್ರವಾರ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರದ ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. […]